< إِشَعْيَاءَ 14 >
لِأَنَّ ٱلرَّبَّ سَيَرْحَمُ يَعْقُوبَ وَيَخْتَارُ أَيْضًا إِسْرَائِيلَ، وَيُرِيحُهُمْ فِي أَرْضِهِمْ، فَتَقْتَرِنُ بِهِمِ ٱلْغُرَبَاءُ وَيَنْضَمُّونَ إِلَى بَيْتِ يَعْقُوبَ. | ١ 1 |
೧ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
وَيَأْخُذُهُمْ شُعُوبٌ وَيَأْتُونَ بِهِمْ إِلَى مَوْضِعِهِمْ، وَيَمْتَلِكُهُمْ بَيْتُ إِسْرَائِيلَ فِي أَرْضِ ٱلرَّبِّ عَبِيدًا وَإِمَاءً، وَيَسْبُونَ ٱلَّذِينَ سَبَوْهُمْ وَيَتَسَلَّطُونَ عَلَى ظَالِمِيهِمْ. | ٢ 2 |
೨ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
وَيَكُونُ فِي يَوْمٍ يُرِيحُكَ ٱلرَّبُّ مِنْ تَعَبِكَ وَمِنِ ٱنْزِعَاجِكَ، وَمِنَ ٱلْعُبُودِيَّةِ ٱلْقَاسِيَةِ ٱلَّتِي ٱسْتُعْبِدْتَ بِهَا، | ٣ 3 |
೩ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
أَنَّكَ تَنْطِقُ بِهَذَا ٱلْهَجْوِ عَلَى مَلِكِ بَابِلَ وَتَقُولُ: «كَيْفَ بَادَ ٱلظَّالِمُ، بَادَتِ ٱلْمُغَطْرِسَةُ؟ | ٤ 4 |
೪ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
قَدْ كَسَّرَ ٱلرَّبُّ عَصَا ٱلْأَشْرَارِ، قَضِيبَ ٱلْمُتَسَلِّطِينَ. | ٥ 5 |
೫ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
ٱلضَّارِبُ ٱلشُّعُوبَ بِسَخَطٍ، ضَرْبَةً بِلَا فُتُورٍ. ٱلْمُتَسَلِّطُ بِغَضَبٍ عَلَى ٱلْأُمَمِ، بِٱضْطِهَادٍ بِلَا إمْسَاكٍ. | ٦ 6 |
೬ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
اِسْتَرَاحَتِ، ٱطْمَأَنَّتْ كُلُّ ٱلْأَرْضِ. هَتَفُوا تَرَنُّمًا. | ٧ 7 |
೭ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
حَتَّى ٱلسَّرْوُ يَفْرَحُ عَلَيْكَ، وَأَرْزُ لُبْنَانَ قَائِلًا: مُنْذُ ٱضْطَجَعْتَ لَمْ يَصْعَدْ عَلَيْنَا قَاطِعٌ. | ٨ 8 |
೮ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
اَلْهَاوِيَةُ مِنْ أَسْفَلُ مُهْتَزَّةٌ لَكَ، لِٱسْتِقْبَالِ قُدُومِكَ، مُنْهِضَةٌ لَكَ ٱلْأَخْيِلَةَ، جَمِيعَ عُظَمَاءِ ٱلْأَرْضِ. أَقَامَتْ كُلَّ مُلُوكِ ٱلْأُمَمِ عَنْ كَرَاسِيِّهِمْ. (Sheol ) | ٩ 9 |
೯ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol )
كُلُّهُمْ يُجِيبُونَ وَيَقُولُونَ لَكَ: أَأَنْتَ أَيْضًا قَدْ ضَعُفْتَ نَظِيرَنَا وَصِرْتَ مِثْلَنَا؟ | ١٠ 10 |
೧೦ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
أُهْبِطَ إِلَى ٱلْهَاوِيَةِ فَخْرُكَ، رَنَّةُ أَعْوَادِكَ. تَحْتَكَ تُفْرَشُ ٱلرِّمَّةُ، وَغِطَاؤُكَ ٱلدُّودُ. (Sheol ) | ١١ 11 |
೧೧ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol )
كَيْفَ سَقَطْتِ مِنَ ٱلسَّمَاءِ يَا زُهَرَةُ، بِنْتَ ٱلصُّبْحِ؟ كَيْفَ قُطِعْتَ إِلَى ٱلْأَرْضِ يَا قَاهِرَ ٱلْأُمَمِ؟ | ١٢ 12 |
೧೨ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
وَأَنْتَ قُلْتَ فِي قَلْبِكَ: أَصْعَدُ إِلَى ٱلسَّمَاوَاتِ. أَرْفَعُ كُرْسِيِّي فَوْقَ كَوَاكِبِ ٱللهِ، وَأَجْلِسُ عَلَى جَبَلِ ٱلِٱجْتِمَاعِ فِي أَقَاصِي ٱلشَّمَالِ. | ١٣ 13 |
೧೩ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
أَصْعَدُ فَوْقَ مُرْتَفَعَاتِ ٱلسَّحَابِ. أَصِيرُ مِثْلَ ٱلْعَلِيِّ. | ١٤ 14 |
೧೪ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
لَكِنَّكَ ٱنْحَدَرْتَ إِلَى ٱلْهَاوِيَةِ، إِلَى أَسَافِلِ ٱلْجُبِّ. (Sheol ) | ١٥ 15 |
೧೫ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. (Sheol )
اَلَّذِينَ يَرَوْنَكَ يَتَطَلَّعُونَ إِلَيْكَ، يَتَأَمَّلُونَ فِيكَ. أَهَذَا هُوَ ٱلرَّجُلُ ٱلَّذِي زَلْزَلَ ٱلْأَرْضَ وَزَعْزَعَ ٱلْمَمَالِكَ، | ١٦ 16 |
೧೬ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
ٱلَّذِي جَعَلَ ٱلْعَالَمَ كَقَفْرٍ، وَهَدَمَ مُدُنَهُ، ٱلَّذِي لَمْ يُطْلِقْ أَسْرَاهُ إِلَى بُيُوتِهِمْ؟ | ١٧ 17 |
೧೭ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
كُلُّ مُلُوكِ ٱلْأُمَمِ بِأَجْمَعِهِمِ ٱضْطَجَعُوا بِٱلْكَرَامَةِ كُلُّ وَاحِدٍ فِي بَيْتِهِ. | ١٨ 18 |
೧೮ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
وَأَمَّا أَنْتَ فَقَدْ طُرِحْتَ مِنْ قَبْرِكَ كَغُصْنٍ أَشْنَعَ، كَلِبَاسِ ٱلْقَتْلَى ٱلْمَضْرُوبِينَ بِٱلسَّيْفِ، ٱلْهَابِطِينَ إِلَى حِجَارَةِ ٱلْجُبِّ، كَجُثَّةٍ مَدُوسَةٍ. | ١٩ 19 |
೧೯ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
لَا تَتَّحِدُ بِهِمْ فِي ٱلْقَبْرِ لِأَنَّكَ أَخْرَبْتَ أَرْضَكَ، قَتَلْتَ شَعْبَكَ. لَا يُسَمَّى إِلَى ٱلْأَبَدِ نَسْلُ فَاعِلِي ٱلشَّرِّ. | ٢٠ 20 |
೨೦ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”
هَيِّئُوا لِبَنِيهِ قَتْلًا بِإِثْمِ آبَائِهِمْ، فَلَا يَقُومُوا وَلَا يَرِثُوا ٱلْأَرْضَ وَلَا يَمْلَأُوا وَجْهَ ٱلْعَالَمِ مُدُنًا». | ٢١ 21 |
೨೧ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
«فَأَقُومُ عَلَيْهِمْ، يَقُولُ رَبُّ ٱلْجُنُودِ. وَأَقْطَعُ مِنْ بَابِلَ ٱسْمًا وَبَقِيَّةً وَنَسْلًا وَذُرِّيَّةً، يَقُولُ ٱلرَّبُّ. | ٢٢ 22 |
೨೨“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
وَأَجْعَلُهَا مِيرَاثًا لِلْقُنْفُذِ، وَآجَامَ مِيَاهٍ، وَأُكَنِّسُهَا بِمِكْنَسَةِ ٱلْهَلَاكِ، يَقُولُ رَبُّ ٱلْجُنُودِ». | ٢٣ 23 |
೨೩“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
قَدْ حَلَفَ رَبُّ ٱلْجُنُودِ قَائِلًا: «إِنَّهُ كَمَا قَصَدْتُ يَصِيرُ، وَكَمَا نَوَيْتُ يَثْبُتُ: | ٢٤ 24 |
೨೪ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
أَنْ أُحَطِّمَ أَشُّورَ فِي أَرْضِي وَأَدُوسَهُ عَلَى جِبَالِي، فَيَزُولَ عَنْهُمْ نِيرُهُ، وَيَزُولَ عَنْ كَتِفِهِمْ حِمْلُهُ». | ٢٥ 25 |
೨೫ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
هَذَا هُوَ ٱلقَضَاءُ ٱلْمَقْضِيُّ بِهِ عَلَى كُلِّ ٱلْأَرْضِ، وَهَذِهِ هِيَ ٱلْيَدُ ٱلْمَمْدُودَةُ عَلَى كُلِّ ٱلْأُمَمِ. | ٢٦ 26 |
೨೬ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
فَإِنَّ رَبَّ ٱلْجُنُودِ قَدْ قَضَى، فَمَنْ يُبَطِّلُ؟ وَيَدُهُ هِيَ ٱلْمَمْدُودَةُ، فَمَنْ يَرُدُّهَا؟ | ٢٧ 27 |
೨೭ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.
فِي سَنَةِ وَفَاةِ ٱلْمَلِكِ آحَازَ كَانَ هَذَا ٱلْوَحْيُ: | ٢٨ 28 |
೨೮ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:
لَا تَفْرَحِي يَا جَمِيعَ فِلِسْطِينَ، لِأَنَّ ٱلْقَضِيبَ ٱلضَّارِبَكِ ٱنْكَسَرَ، فَإِنَّهُ مِنْ أَصْلِ ٱلْحَيَّةِ يَخْرُجُ أُفْعُوانٌ، وَثَمَرَتُهُ تَكُونُ ثُعْبَانًا مُسِمًّا طَيَّارًا. | ٢٩ 29 |
೨೯ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
وَتَرْعَى أَبْكَارُ ٱلْمَسَاكِينِ، وَيَرْبِضُ ٱلْبَائِسُونَ بِٱلْأَمَانِ، وَأُمِيتُ أَصْلَكِ بِٱلْجُوعِ، فَيَقْتُلُ بَقِيَّتَكِ. | ٣٠ 30 |
೩೦ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.
وَلْوِلْ أَيُّهَا ٱلْبَابُ. ٱصْرُخِي أَيَّتُهَا ٱلْمَدِينَةُ. قَدْ ذَابَ جَمِيعُكِ يَا فِلِسْطِينُ، لِأَنَّهُ مِنَ ٱلشَّمَالِ يَأْتِي دُخَانٌ، وَلَيْسَ شَاذٌّ فِي جُيُوشِهِ. | ٣١ 31 |
೩೧ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
فَبِمَاذَا يُجَابُ رُسُلُ ٱلْأُمَمِ؟ إِنَّ ٱلرَّبَّ أَسَّسَ صِهْيَوْنَ، وَبِهَا يَحْتَمِي بَائِسُو شَعْبِهِ. | ٣٢ 32 |
೩೨ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.