< أَيُّوبَ 29 >
وَعَادَ أَيُّوبُ يَنْطِقُ بِمَثَلِهِ فَقَالَ: | ١ 1 |
೧ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,
«يَا لَيْتَنِي كَمَا فِي ٱلشُّهُورِ ٱلسَّالِفَةِ وَكَٱلْأَيَّامِ ٱلَّتِي حَفِظَنِي ٱللهُ فِيهَا، | ٢ 2 |
೨“ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!
حِينَ أَضَاءَ سِرَاجَهُ عَلَى رَأْسِي، وَبِنُورِهِ سَلَكْتُ ٱلظُّلْمَةَ. | ٣ 3 |
೩ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.
كَمَا كُنْتُ فِي أَيَّامِ خَرِيفِي، وَرِضَا ٱللهِ عَلَى خَيْمَتِي، | ٤ 4 |
೪ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.
وَٱلْقَدِيرُ بَعْدُ مَعِي وَحَوْلِي غِلْمَانِي، | ٥ 5 |
೫ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.
إِذْ غَسَلْتُ خَطَوَاتِي بِٱللَّبَنِ، وَٱلصَّخْرُ سَكَبَ لِي جَدَاوِلَ زَيْتٍ. | ٦ 6 |
೬ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
حِينَ كُنْتُ أَخْرُجُ إِلَى ٱلْبَابِ فِي ٱلْقَرْيَةِ، وَأُهَيِّئُ فِي ٱلسَّاحَةِ مَجْلِسِي. | ٧ 7 |
೭ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ
رَآنِي ٱلْغِلْمَانُ فَٱخْتَبَأُوا، وَٱلْأَشْيَاخُ قَامُوا وَوَقَفُوا. | ٨ 8 |
೮ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.
ٱلْعُظَمَاءُ أَمْسَكُوا عَنِ ٱلْكَلَامِ، وَوَضَعُوا أَيْدِيَهُمْ عَلَى أَفْوَاهِهِمْ. | ٩ 9 |
೯ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.
صَوْتُ ٱلشُّرَفَاءِ ٱخْتَفَى، وَلَصِقَتْ أَلْسِنَتُهُمْ بِأَحْنَاكِهِمْ. | ١٠ 10 |
೧೦ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು.
لِأَنَّ ٱلْأُذُنَ سَمِعَتْ فَطَوَّبَتْنِي، وَٱلْعَيْنَ رَأَتْ فَشَهِدَتْ لِي، | ١١ 11 |
೧೧ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
لِأَنِّي أَنْقَذْتُ ٱلْمِسْكِينَ ٱلْمُسْتَغِيثَ وَٱلْيَتِيمَ وَلَا مُعِينَ لَهُ. | ١٢ 12 |
೧೨ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
بَرَكَةُ ٱلْهَالِكِ حَلَّتْ عَلَيَّ، وَجَعَلْتُ قَلْبَ ٱلْأَرْمَلَةِ يُسَرُّ. | ١٣ 13 |
೧೩ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.
لَبِسْتُ ٱلْبِرَّ فَكَسَانِي. كَجُبَّةٍ وَعِمَامَةٍ كَانَ عَدْلِي. | ١٤ 14 |
೧೪ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.
كُنْتُ عُيُونًا لِلْعُمْيِ، وَأَرْجُلًا لِلْعُرْجِ. | ١٥ 15 |
೧೫ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.
أَبٌ أَنَا لِلْفُقَرَاءِ، وَدَعْوَى لَمْ أَعْرِفْهَا فَحَصْتُ عَنْهَا. | ١٦ 16 |
೧೬ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.
هَشَّمْتُ أَضْرَاسَ ٱلظَّالِمِ، وَمِنْ بَيْنِ أَسْنَانِهِ خَطَفْتُ ٱلْفَرِيسَةَ. | ١٧ 17 |
೧೭ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.
فَقُلْتُ: إِنِّي فِي وَكْرِي أُسَلِّمُ ٱلرُّوحَ، وَمِثْلَ ٱلسَّمَنْدَلِ أُكَثِّرُ أَيَّامًا. | ١٨ 18 |
೧೮ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.
أَصْلِي كَانَ مُنْبَسِطًا إِلَى ٱلْمِيَاهِ، وَٱلطَّلُّ بَاتَ عَلَى أَغْصَانِي. | ١٩ 19 |
೧೯ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.
كَرَامَتِي بَقِيَتْ حَدِيثَةً عِنْدِي، وَقَوْسِي تَجَدَّدَتْ فِي يَدِي. | ٢٠ 20 |
೨೦ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ.
لِي سَمِعُوا وَٱنْتَظَرُوا، وَنَصَتُوا عِنْدَ مَشُورَتِي. | ٢١ 21 |
೨೧ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.
بَعْدَ كَلَامِي لَمْ يُثَنُّوا، وَقَوْلِي قَطَرَ عَلَيْهِمْ. | ٢٢ 22 |
೨೨ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,
وَٱنْتَظَرُونِي مِثْلَ ٱلْمَطَرِ، وَفَغَرُوا أَفْوَاهَهُمْ كَمَا لِلْمَطَرِ ٱلْمُتَأَخِّرِ. | ٢٣ 23 |
೨೩ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.
إِنْ ضَحِكْتُ عَلَيْهِمْ لَمْ يُصَدِّقُوا، وَنُورَ وَجْهِي لَمْ يُعَبِّسُوا. | ٢٤ 24 |
೨೪ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.
كُنْتُ أَخْتَارُ طَرِيقَهُمْ وَأَجْلِسُ رَأْسًا، وَأَسْكُنُ كَمَلِكٍ فِي جَيْشٍ، كَمَنْ يُعَزِّي ٱلنَّائِحِينَ. | ٢٥ 25 |
೨೫ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”