< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 19 >

1 ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
और शाह — ए — यहूदाह यहूसफ़त येरूशलेम को अपने महल में सलामत लौटा।
2 ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
तब हनानी ग़ैबबीन का बेटा याहू उसके इस्तक़बाल को निकला, और यहूसफ़त बादशाह से कहने लगा, क्या मुनासिब है कि तू शरीरों की मदद करे, और ख़ुदावन्द के दुश्मनों से मुहब्बत रखें? इस बात की वजह से ख़ुदावन्द की तरफ़ से तुझ पर ग़ज़ब है।
3 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
तो भी तुझ में ख़ूबियाँ हैं; क्यूँकि तू ने यसीरतों को मुल्क में से दफ़ा' किया, और ख़ुदा की तलाश में अपना दिल लगाया है।
4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
यहूसफ़त येरूशलेम में रहता था, और उसने फिर बैरसबा' से इफ़्राईम के पहाड़ी तक लोगों के बीच दौरा करके, उनको ख़ुदावन्द उनके बाप — दादा के ख़ुदा की तरफ़ फिर मोड़ दिया।
5 ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.
उसने यहूदाह के सब फ़सीलदार शहरों में शहर — ब — शहर क़ाज़ी मुक़र्रर किए,
6 ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
और क़ाज़ियों से कहा, जो कुछ करो सोच समझकर करो, क्यूँकि तुम आदमियों की तरफ़ से नहीं, बल्कि ख़ुदावन्द की तरफ़ से 'अदालत करते हो; और वह फ़ैसले में तुम्हारे साथ है।
7 ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
फिर ख़ुदावन्द का ख़ौफ़ तुम में रहे; इसलिए ख़बरदारी से काम करना, क्यूँकि ख़ुदावन्द हमारे ख़ुदा में बेइन्साफ़ी नहीं है, और न किसी की रूदारी न रिश्वत ख़ोरी।
8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
और येरूशलेम में भी यहूसफ़त ने लावियों और काहिनों और इस्राईल के आबाई ख़ान्दानों के सरदारों में से लोगों को, ख़ुदावन्द की 'अदालत और मुक़द्दमों के लिए मुक़र्रर किया; और वह येरूशलेम को लौटे
9 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,
और उसने उनको ताकीद की और कहा कि तुम ख़ुदावन्द के ख़ौफ़ से दियानतदारी और कामिल दिल से ऐसा करना।
10 ೧೦ ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.
जब कभी तुम्हारे भाइयों की तरफ़ से जो अपने शहरों में रहते हैं, कोई मुक़द्दमा तुम्हारे सामने आए, जो आपस के ख़ून से या शरी'अत और फ़रमान या क़ानून और 'अदालत से ता'अल्लुक़ रखता हो, तो तुम उनको आगाह कर देना कि वह ख़ुदावन्द का गुनाह न करें, जिससे तुम पर और तुम्हारे भाइयों पर ग़ज़ब नाज़िल हो। यह करो तो तुम से ख़ता न होगी।
11 ೧೧ ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.
और देखो, ख़ुदावन्द के सब मु'आमिलों में अमरियाह काहिन तुम्हारा सरदार है, और बादशाह के सब मु'आमिलों में ज़बदियाह बिन इस्माईल है, जो यहूदाह के ख़ान्दान का रहनुमा है; और लावी भी तुम्हारे आगे सरदार होंगे। हौसले के साथ काम करना और ख़ुदावन्द नेकों के साथ हो।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 19 >