< ಯೆಹೆಜ್ಕೇಲನು 7 >

1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
καὶ ἐγένετο λόγος κυρίου πρός με λέγων
2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
καὶ σύ υἱὲ ἀνθρώπου εἰπόν τάδε λέγει κύριος τῇ γῇ τοῦ Ισραηλ πέρας ἥκει τὸ πέρας ἥκει ἐπὶ τὰς τέσσαρας πτέρυγας τῆς γῆς
3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
ἥκει τὸ πέρας
4 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
ἐπὶ σὲ τὸν κατοικοῦντα τὴν γῆν ἥκει ὁ καιρός ἤγγικεν ἡ ἡμέρα οὐ μετὰ θορύβων οὐδὲ μετὰ ὠδίνων
5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
νῦν ἐγγύθεν ἐκχεῶ τὴν ὀργήν μου ἐπὶ σὲ καὶ συντελέσω τὸν θυμόν μου ἐν σοὶ καὶ κρινῶ σε ἐν ταῖς ὁδοῖς σου καὶ δώσω ἐπὶ σὲ πάντα τὰ βδελύγματά σου
6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
οὐ φείσεται ὁ ὀφθαλμός μου οὐδὲ μὴ ἐλεήσω διότι τὰς ὁδούς σου ἐπὶ σὲ δώσω καὶ τὰ βδελύγματά σου ἐν μέσῳ σου ἔσονται καὶ ἐπιγνώσῃ διότι ἐγώ εἰμι κύριος ὁ τύπτων
7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
νῦν τὸ πέρας πρὸς σέ καὶ ἀποστελῶ ἐγὼ ἐπὶ σὲ καὶ ἐκδικήσω σε ἐν ταῖς ὁδοῖς σου καὶ δώσω ἐπὶ σὲ πάντα τὰ βδελύγματά σου
8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
οὐ φείσεται ὁ ὀφθαλμός μου ἐπὶ σέ οὐδὲ μὴ ἐλεήσω διότι τὴν ὁδόν σου ἐπὶ σὲ δώσω καὶ τὰ βδελύγματά σου ἐν μέσῳ σου ἔσται καὶ ἐπιγνώσῃ διότι ἐγὼ κύριος
9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
διότι τάδε λέγει κύριος
10 ೧೦ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
ἰδοὺ τὸ πέρας ἥκει ἰδοὺ ἡμέρα κυρίου εἰ καὶ ἡ ῥάβδος ἤνθηκεν ἡ ὕβρις ἐξανέστηκεν
11 ೧೧ ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
καὶ συντρίψει στήριγμα ἀνόμου καὶ οὐ μετὰ θορύβου οὐδὲ μετὰ σπουδῆς
12 ೧೨ ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
ἥκει ὁ καιρός ἰδοὺ ἡ ἡμέρα ὁ κτώμενος μὴ χαιρέτω καὶ ὁ πωλῶν μὴ θρηνείτω
13 ೧೩ ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
διότι ὁ κτώμενος πρὸς τὸν πωλοῦντα οὐκέτι μὴ ἐπιστρέψῃ καὶ ἄνθρωπος ἐν ὀφθαλμῷ ζωῆς αὐτοῦ οὐ κρατήσει
14 ೧೪ ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
σαλπίσατε ἐν σάλπιγγι καὶ κρίνατε τὰ σύμπαντα
15 ೧೫ ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
ὁ πόλεμος ἐν ῥομφαίᾳ ἔξωθεν καὶ ὁ λιμὸς καὶ ὁ θάνατος ἔσωθεν ὁ ἐν τῷ πεδίῳ ἐν ῥομφαίᾳ τελευτήσει τοὺς δὲ ἐν τῇ πόλει λιμὸς καὶ θάνατος συντελέσει
16 ೧೬ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
καὶ ἀνασωθήσονται οἱ ἀνασῳζόμενοι ἐξ αὐτῶν καὶ ἔσονται ἐπὶ τῶν ὀρέων πάντας ἀποκτενῶ ἕκαστον ἐν ταῖς ἀδικίαις αὐτοῦ
17 ೧೭ ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
πᾶσαι χεῖρες ἐκλυθήσονται καὶ πάντες μηροὶ μολυνθήσονται ὑγρασίᾳ
18 ೧೮ ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
καὶ περιζώσονται σάκκους καὶ καλύψει αὐτοὺς θάμβος καὶ ἐπὶ πᾶν πρόσωπον αἰσχύνη ἐπ’ αὐτούς καὶ ἐπὶ πᾶσαν κεφαλὴν φαλάκρωμα
19 ೧೯ ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
τὸ ἀργύριον αὐτῶν ῥιφήσεται ἐν ταῖς πλατείαις καὶ τὸ χρυσίον αὐτῶν ὑπεροφθήσεται αἱ ψυχαὶ αὐτῶν οὐ μὴ ἐμπλησθῶσιν καὶ αἱ κοιλίαι αὐτῶν οὐ μὴ πληρωθῶσιν διότι βάσανος τῶν ἀδικιῶν αὐτῶν ἐγένετο
20 ೨೦ ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
ἐκλεκτὰ κόσμου εἰς ὑπερηφανίαν ἔθεντο αὐτὰ καὶ εἰκόνας τῶν βδελυγμάτων αὐτῶν ἐποίησαν ἐξ αὐτῶν ἕνεκεν τούτου δέδωκα αὐτὰ αὐτοῖς εἰς ἀκαθαρσίαν
21 ೨೧ ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
καὶ παραδώσω αὐτὰ εἰς χεῖρας ἀλλοτρίων τοῦ διαρπάσαι αὐτὰ καὶ τοῖς λοιμοῖς τῆς γῆς εἰς σκῦλα καὶ βεβηλώσουσιν αὐτά
22 ೨೨ ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
καὶ ἀποστρέψω τὸ πρόσωπόν μου ἀπ’ αὐτῶν καὶ μιανοῦσιν τὴν ἐπισκοπήν μου καὶ εἰσελεύσονται εἰς αὐτὰ ἀφυλάκτως καὶ βεβηλώσουσιν αὐτά
23 ೨೩ ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
καὶ ποιήσουσι φυρμόν διότι ἡ γῆ πλήρης λαῶν καὶ ἡ πόλις πλήρης ἀνομίας
24 ೨೪ ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
καὶ ἀποστρέψω τὸ φρύαγμα τῆς ἰσχύος αὐτῶν καὶ μιανθήσεται τὰ ἅγια αὐτῶν
25 ೨೫ ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
ἐξιλασμὸς ἥξει καὶ ζητήσει εἰρήνην καὶ οὐκ ἔσται
26 ೨೬ ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
οὐαὶ ἐπὶ οὐαὶ ἔσται καὶ ἀγγελία ἐπ’ ἀγγελίαν ἔσται καὶ ζητηθήσεται ὅρασις ἐκ προφήτου καὶ νόμος ἀπολεῖται ἐξ ἱερέως καὶ βουλὴ ἐκ πρεσβυτέρων
27 ೨೭ ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
ἄρχων ἐνδύσεται ἀφανισμόν καὶ αἱ χεῖρες τοῦ λαοῦ τῆς γῆς παραλυθήσονται κατὰ τὰς ὁδοὺς αὐτῶν ποιήσω αὐτοῖς καὶ ἐν τοῖς κρίμασιν αὐτῶν ἐκδικήσω αὐτούς καὶ γνώσονται ὅτι ἐγὼ κύριος

< ಯೆಹೆಜ್ಕೇಲನು 7 >