< ಯೆರೆಮೀಯನು 37 >

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
और सिदक़ियाह बिन यूसियाह जिसको शाह — ए — बाबुल नबूकदनज़र ने मुल्क — ए — यहूदाह पर बादशाह मुक़र्रर किया था, कूनियाह बिन यहुयक़ीम की जगह बादशाही करने लगा।
2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
लेकिन न उसने, न उसके मुलाज़िमों ने, न मुल्क के लोगों ने ख़ुदावन्द की वह बातें सुनीं, जो उसने यरमियाह नबी के ज़रिए' फ़रमाई थीं।
3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
और सिदक़ियाह बादशाह ने यहूकल — बिन सलमियाह और सफ़नियाह — बिन — मासियाह काहिन के ज़रिए' यरमियाह नबी को कहला भेजा कि अब हमारे लिए ख़ुदावन्द हमारे ख़ुदा से दुआ कर।
4 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.
हुनूज़ यरमियाह लोगों के बीच आया जाया करता था, क्यूँकि उन्होंने अभी उसे क़ैदख़ाने में नहीं डाला था।
5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
इस वक़्त फ़िर'औन की फ़ौज ने मिस्र से चढ़ाई की; और जब कसदियों ने जो येरूशलेम का घिराव किए थे इसकी शोहरत सुनी, तो वहाँ से चले गए।
6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.
तब ख़ुदावन्द का यह कलाम यरमियाह नबी पर नाज़िल हुआ:
7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
कि ख़ुदावन्द, इस्राईल का ख़ुदा, यूँ फ़रमाता है कि: तुम शाह — ए — यहूदाह से जिसने तुम को मेरी तरफ़ भेजा कि मुझसे दरियाफ़्त करो, यूँ कहना कि देख, फ़िर'औन की फ़ौज जो तुम्हारी मदद को निकली है, अपने मुल्क — ए — मिस्र को लौट जाएगी।
8 ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
और कसदी वापस आकर इस शहर से लड़ेंगे, और इसे फ़तह करके आग से जलाएँगे।
9 ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
ख़ुदावन्द यूँ फ़रमाता है कि: तुम यह कह कर अपने आपको फ़रेब न दो, कसदी ज़रूर हमारे पास से चले जाएँगे, क्यूँकि वह न जाएँगे।
10 ೧೦ ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
और अगरचे तुम कसदियों की तमाम फ़ौज को जो तुम से लड़ती है, ऐसी शिकस्त देते कि उनमें से सिर्फ़ ज़ख़्मी बाक़ी रहते, तो भी वह सब अपने — अपने ख़ेमे से उठते और इस शहर को जला देते।
11 ೧೧ ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
और जब कसदियों की फ़ौज फ़िर'औन की फ़ौज के डर से येरूशलेम के सामने से रवाना हो गई,
12 ೧೨ ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
तो यरमियाह येरूशलेम से निकला कि बिनयमीन के 'इलाक़े में जाकर वहाँ लोगों के बीच अपना हिस्सा ले।
13 ೧೩ ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
और जब वह बिनयमीन के फाटक पर पहुँचा, तो वहाँ पहरेवालों का दारोग़ा था, जिसका नाम इर्रियाह — बिन — सलमियाह — बिन — हननियाह था, और उसने यरमियाह नबी को पकड़ा और कहा तू क़सदियों की तरफ़ भागा जाता है।
14 ೧೪ ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
तब यरमियाह ने कहा, यह झूट है; मैं कसदियों की तरफ़ भागा नहीं जाता हूँ, लेकिन उसने उसकी एक न सुनी; तब इर्रियाह यरमियाह को पकड़ कर हाकिम के पास लाया।
15 ೧೫ ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
और हाकिम यरमियाह पर ग़ज़बनाक हुए और उसे मारा, और यूनतन मुन्शी के घर में उसे क़ैद किया; क्यूँकि उन्होंने उस घर को क़ैदख़ाना बना रख्खा था।
16 ೧೬ ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
जब यरमियाह क़ैदख़ाने में और उसके तहख़ानों में दाख़िल होकर बहुत दिनों तक वहाँ रह चुका;
17 ೧೭ ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
तो सिदक़ियाह बादशाह ने आदमी भेजकर उसे निकलवाया, और अपने महल में उससे ख़ुफ़िया तौर से दरियाफ़्त किया कि “क्या ख़ुदावन्द की तरफ़ से कोई कलाम है?” और यरमियाह ने कहा है कि “क्यूँकि उसने फ़रमाया है कि तू शाह — ए — बाबुल के हवाले किया जाएगा।”
18 ೧೮ ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
और यरमियाह ने सिदक़ियाह बादशाह से कहा, मैंने तेरा, और तेरे मुलाज़िमों का, और इन लोगों का क्या गुनाह किया है कि तुमने मुझे क़ैदख़ाने में डाला है?
19 ೧೯ ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
अब तुम्हारे नबी कहाँ हैं, जो तुम से नबुव्वत करते और कहते थे, 'शाह — ए — बाबुल तुम पर और इस मुल्क पर चढ़ाई नहीं करेगा'?
20 ೨೦ ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
अब ऐ बादशाह, मेरे आक़ा मेरी सुन; मेरी दरख़्वास्त क़ुबूल फ़रमा और मुझे यूनतन मुन्शी के घर में वापस न भेज, ऐसा न हो कि मैं वहाँ मर जाऊँ।
21 ೨೧ ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
तब सिदक़ियाह बादशाह ने हुक्म दिया, और उन्होंने यरमियाह को क़ैदख़ाने के सहन में रख्खा; और हर रोज़ उसे नानबाइयों के महल्ले से एक रोटी ले कर देते रहे, जब तक कि शहर में रोटी मिल सकती थी। इसलिए यरमियाह क़ैदख़ाने के सहन में रहा।

< ಯೆರೆಮೀಯನು 37 >