< ಮಾರ್ಕನು 1 >

1 ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
هَذِهِ بِدَايَةُ إِنْجِيلِ يَسُوعَ الْمَسِيحِ ابْنِ اللهِ:١
2 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
كَمَا كُتِبَ فِي كِتَابِ إِشَعْيَاءَ: «هَا أَنَا أُرْسِلُ قُدَّامَكَ مَلاكِي الَّذِي يُعِدُّ لَكَ الطَّرِيقَ؛٢
3 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
صَوْتُ مُنَادٍ فِي الْبَرِّيَّةِ: أَعِدُّوا طَرِيقَ الرَّبِّ، وَاجْعَلُوا سُبُلَهُ مُسْتَقِيمَةً!»٣
4 ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
فَقَدْ ظَهَرَ يُوحَنَّا الْمَعْمَدَانُ فِي الْبَرِّيَّةِ يُنَادِي بِمَعْمُودِيَّةِ التَّوْبَةِ لِمَغْفِرَةِ الْخَطَايَا.٤
5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
وَخَرَجَ إِلَيْهِ أَهْلُ مِنْطَقَةِ الْيَهُودِيَّةِ وَأَهْلُ أُورُشَلِيمَ جَمِيعاً، فَكَانُوا يَتَعَمَّدُونَ عَلَى يَدِهِ فِي نَهْرِ الأُرْدُنِّ مُعْتَرِفِينَ بِخَطَايَاهُمْ.٥
6 ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
وَكَانَ يُوحَنَّا يَلْبَسُ ثَوْباً مِنْ وَبَرِ الْجِمَالِ، وَيَلُفُّ وَسَطَهُ بِحِزَامٍ مِنْ جِلْدٍ، وَيَأْكُلُ الْجَرَادَ وَالْعَسَلَ الْبَرِّيَّ.٦
7 ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
وَكَانَ يَعِظُ قَائِلاً: «سَيَأْتِي بَعْدِي مَنْ هُوَ أَقْدَرُ مِنِّي، مَنْ لَا أَسْتَحِقُّ أَنْ أَنْحَنِيَ لأَحُلَّ رِبَاطَ حِذَائِهِ.٧
8 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
أَنَا عَمَّدْتُكُمْ بِالْمَاءِ؛ أَمَّا هُوَ فَسَوْفَ يُعَمِّدُكُمْ بِالرُّوحِ الْقُدُسِ».٨
9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
فِي تِلْكَ الأَيَّامِ جَاءَ يَسُوعُ مِنَ النَّاصِرَةِ بِمِنْطَقَةِ الْجَلِيلِ، وَتَعَمَّدَ فِي نَهْرِ الأُرْدُنِّ عَلَى يَدِ يُوحَنَّا.٩
10 ೧೦ ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
وَبَمُجَرَّدِ أَنْ صَعِدَ مِنَ الْمَاءِ، رَأَى السَّمَاوَاتِ قَدِ انْفَتَحَتْ، وَالرُّوحَ القُدُسَ هَابِطاً عَلَيْهِ كَأَنَّهُ حَمَامَةٌ،١٠
11 ೧೧ ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
وَإذَا صَوْتٌ مِنَ السَّمَاوَاتِ يَقُولُ: «أَنْتَ ابْنِي الْحَبِيبُ، بِكَ سُرِرْتُ كُلَّ سُرُورٍ!»١١
12 ೧೨ ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
وَفِي الْحَالِ اقْتَادَ الرُّوحُ يَسُوعَ إِلَى الْبَرِّيَّةِ،١٢
13 ೧೩ ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
فَقَضَى فِيهَا أَرْبَعِينَ يَوْماً وَالشَّيْطَانُ يُجَرِّبُهُ. وَكَانَ بَيْنَ الْوُحُوشِ وَمَلائِكَةٌ تَخْدِمُهُ.١٣
14 ೧೪ ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
وَبَعْدَمَا أُلْقِيَ الْقَبْضُ عَلَى يُوحَنَّا، انْطَلَقَ يَسُوعُ إِلَى مِنْطَقَةِ الْجَلِيلِ، يُعْلِنُ بِشَارَةَ اللهِ قَائِلاً:١٤
15 ೧೫ “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
«قَدِ اكْتَمَلَ الزَّمَانُ وَاقْتَرَبَ مَلَكُوتُ اللهِ. فَتُوبُوا وَآمِنُوا بِالإِنْجِيلِ!»١٥
16 ೧೬ ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
وَفِيمَا كَانَ يَسُوعُ يَمْشِي عَلَى شَاطِئِ بُحَيْرَةِ الْجَلِيلِ، رَأَى سِمْعَانَ وَأَخَاهُ أَنْدَرَاوُسَ يُلْقِيَانِ الشَّبَكَةَ فِي الْبُحَيْرَةِ، فَقَدْ كَانَا صَيَّادَيْنِ.١٦
17 ೧೭ ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
فَقَالَ لَهُمَا يَسُوعُ: «هَيَّا اتْبَعَانِي، فَأَجْعَلَكُمَا صَيَّادَيْنِ لِلنَّاسِ!»١٧
18 ೧೮ ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
فَتَرَكَا شِبَاكَهُمَا وَتَبِعَاهُ.١٨
19 ೧೯ ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
ثُمَّ سَارَ مِنْ هُنَاكَ قَلِيلاً، فَرَأَى يَعْقُوبَ بْنَ زَبَدِي وَيُوحَنَّا أَخَاهُ فِي الْقَارِبِ يُصْلِحَانِ الشِّبَاكَ،١٩
20 ೨೦ ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
فَدَعَاهُمَا فِي الْحَالِ لِيَتْبَعَاهُ، فَتَرَكَا أَبَاهُمَا زَبَدِي فِي الْقَارِبِ مَعَ الأُجَرَاءِ، وَتَبِعَاهُ.٢٠
21 ೨೧ ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
ثُمَّ ذَهَبُوا إِلَى كَفْرَنَاحُومَ. فَدَخَلَ حَالاً، فِي يَوْمِ السَّبْتِ، إِلَى الْمَجْمَعِ وَأَخَذَ يُعَلِّمُ.٢١
22 ೨೨ ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
فَذُهِلَ الْحَاضِرُونَ مِنْ تَعْلِيمِهِ، لأَنَّهُ كَانَ يُعَلِّمُهُمْ كَصَاحِبِ سُلْطَانٍ وَلَيْسَ كَالْكَتَبَةِ.٢٢
23 ೨೩ ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
وَكَانَ فِي مَجْمَعِهِمْ رَجُلٌ يَسْكُنُهُ رُوحٌ نَجِسٌ، فَصَرَخَ٢٣
24 ೨೪ ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
وَقَالَ: «مَا شَأْنُكَ بِنَا يَا يَسُوعُ النَّاصِرِيُّ؟ أَجِئْتَ لِتُهْلِكَنَا؟ أَنَا أَعْرِفُ مَنْ أَنْتَ. أَنْتَ قُدُّوسُ اللهِ!»٢٤
25 ೨೫ ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
فَزَجَرَهُ يَسُوعُ قَائِلاً: «اخْرَسْ وَاخْرُجْ مِنْهُ!»٢٥
26 ೨೬ ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
فَطَرَحَ الرُّوحُ النَّجِسُ الرَّجُلَ، وَصَرَخَ صَرْخَةً عَالِيَةً، وَخَرَجَ مِنْهُ.٢٦
27 ೨೭ ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
فَدُهِشَ الْجَمِيعُ حَتَّى أَخَذُوا يَتَسَاءَلُونَ فِيمَا بَيْنَهُمْ: «مَا هَذَا؟ إِنَّهُ تَعْلِيمٌ جَدِيدٌ، يُلْقَى بسُلْطَانٍ، فَحَتَّى الأَرْوَاحُ النَّجِسَةُ يَأْمُرُهَا فَتُطِيعُهُ!»٢٧
28 ೨೮ ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
وَفِي الْحَالِ انْتَشَرَ خَبَرُ يَسُوعَ فِي كُلِّ مَكَانٍ مِنَ الْمِنْطَقَةِ الْمُجَاوِرَةِ لِلْجَلِيلِ.٢٨
29 ೨೯ ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
وَحَالَمَا غَادَرُوا الْمَجْمَعَ، دَخَلُوا بَيْتَ سِمْعَانَ وَأَنْدَرَاوُسَ، وَمَعَهُمْ يَعْقُوبُ وَيُوحَنَّا.٢٩
30 ೩೦ ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
وَكَانَتْ حَمَاةُ سِمْعَانَ طَرِيحَةَ الْفِرَاشِ، تُعَانِي مِنَ الْحُمَّى. فَفِي الْحَالِ كَلَّمُوا يَسُوعَ بِشَأْنِهَا.٣٠
31 ೩೧ ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
فَاقْتَرَبَ إِلَيْهَا، وَأَمْسَكَ بِيَدِهَا وَأَنْهَضَهَا. فَذَهَبَتْ عَنْهَا الْحُمَّى حَالاً، وَقَامَتْ تَخْدِمُهُمْ.٣١
32 ೩೨ ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
وَعِنْدَ حُلُولِ الْمَسَاءِ، لَمَّا غَرَبَتِ الشَّمْسُ، أَحْضَرَ النَّاسُ إِلَيْهِ جَمِيعَ مَنْ كَانُوا مَرْضَى وَمَسْكُونِينَ بِالشَّيَاطِينِ،٣٢
33 ೩೩ ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
حَتَّى احْتَشَدَ أَهْلُ الْمَدِينَةِ كُلُّهُمْ عِنْدَ البَابِ.٣٣
34 ೩೪ ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
فَشَفَى كَثِيرِينَ كَانُوا يُعَانُونَ مِنْ أَمْرَاضٍ مُخْتَلِفَةٍ، وَطَرَدَ شَيَاطِينَ كَثِيرَةً، وَلكِنَّهُ لَمْ يَسْمَحْ لِلشَّيَاطِينِ بِأَنْ يَتَكَلَّمُوا، لأَنَّهُمْ عَرَفُوا مَنْ هُوَ.٣٤
35 ೩೫ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
وَفِي الْيَوْمِ التَّالِي، نَهَضَ بَاكِراً قَبْلَ الْفَجْرِ، وَخَرَجَ إِلَى مَكَانٍ مُنْعَزِلٍ وَأَخَذَ يُصَلِّي هُنَاكَ.٣٥
36 ೩೬ ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
فَذَهَبَ سِمْعَانُ وَمَنْ مَعَهُ يَبْحَثُونَ عَنْهُ. فَلَمَّا وَجَدُوهُ قَالُوا لَهُ:٣٦
37 ೩೭ ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
«إِنَّ الْجَمِيعَ يَطْلُبُونَكَ!»٣٧
38 ೩೮ ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
فَقَالَ لَهُمْ: «لِنَذْهَبْ إِلَى مَكَانٍ آخَرَ فِي الْقُرَى الْمُجَاوِرَةِ لأُبَشِّرَ هُنَاكَ أَيْضاً. فَلأَجْلِ هَذَا جِئْتُ.»٣٨
39 ೩೯ ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
وَذَهَبَ يُبَشِّرُ فِي مَجَامِعِ الْيَهُودِ فِي مِنْطَقَةِ الْجَلِيلِ كُلِّهَا، وَيَطْرُدُ الشَّيَاطِينَ.٣٩
40 ೪೦ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
وَجَاءَهُ رَجُلٌ مُصَابٌ بِالْبَرَصِ يَتَوَسَّلُ إِلَيْهِ. فَارْتَمَى عَلَى رُكْبَتَيْهِ أَمَامَهُ وَقَالَ: «إِنْ أَرَدْتَ، فَأَنْتَ تَقْدِرُ أَنْ تُطَهِّرَنِي!»٤٠
41 ೪೧ ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
فَتَحَنَّنَ يَسُوعُ وَمَدَّ يَدَهُ وَلَمَسَهُ قَائِلاً: «أُرِيدُ، فَاطْهُرْ!»٤١
42 ೪೨ ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
فَحَالَمَا تَكَلَّمَ زَالَ الْبَرَصُ عَنْهُ وَطَهَرَ.٤٢
43 ೪೩ ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
وَفِي الْحَالِ صَرَفَهُ يَسُوعُ بَعْدَمَا أَنْذَرَهُ بِشِدَّةٍ٤٣
44 ೪೪ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
قَائِلاً: «انْتَبِهْ! لَا تُخْبِرْ أَحَداً بِشَيْءٍ، بَلِ اذْهَبْ وَاعْرِضْ نَفْسَكَ عَلَى الْكَاهِنِ، وَقَدِّمْ لِقَاءَ تَطْهِيرِكَ مَا أَمَرَ بِهِ مُوسَى، فَيَكُونَ ذَلِكَ شَهَادَةً لَهُمْ!»٤٤
45 ೪೫ ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
أَمَّا هُوَ، فَانْطَلَقَ يُنَادِي كَثِيراً وَيُذِيعُ الْخَبَرَ، حَتَّى لَمْ يَعُدْ يَسُوعُ يَقْدِرُ أَنْ يَدْخُلَ أَيَّةَ بَلْدَةٍ عَلَناً، بَلْ كَانَ يُقِيمُ فِي أَمَاكِنَ مُقْفِرَةٍ، وَالنَّاسُ يَتَوَافَدُونَ إِلَيْهِ مِنْ كُلِّ مَكَانٍ.٤٥

< ಮಾರ್ಕನು 1 >