< ಅರಣ್ಯಕಾಂಡ 14 >

1 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
فَرَفَعَ الشَّعْبُ كُلُّهُ صَوْتَهُ وَبَكَى فِي تِلْكَ اللَّيْلَةِ،١
2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
وَتَذَمَّرَ عَلَى مُوسَى وَهَرُونَ، وَقَالُوا: «لَيْتَنَا مُتْنَا فِي دِيَارِ مِصْرَ، أَوْ لَيْتَنَا مُتْنَا فِي الصَّحْرَاءِ.٢
3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
لِمَاذَا أَحْضَرَنَا الرَّبُّ إِلَى هَذِهِ الأَرْضِ لِنَهْلِكَ بِحَدِّ السَّيْفِ، وَتُؤْخَذَ نِسَاؤُنَا وَأَطْفَالُنَا سَبَايَا؟ أَلَيْسَ مِنَ الأَفْضَلِ لَنَا أَنْ نَرْجِعَ إِلَى مِصْرَ؟»٣
4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.
وَقَالَ بَعْضُهُمْ لِبَعْضٍ: «لِنَنْتَخِبْ لَنَا قَائِداً وَنَرْجِعْ إِلَى مِصْرَ».٤
5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
فَخَرَّ مُوسَى وَهَرُونُ عَلَى وَجْهَيْهِمَا أَمَامَ جَمِيعِ شَعْبِ إِسْرَائِيلَ،٥
6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
وَمَزَّقَ يَشُوعُ بْنُ نُونَ وَكَالَبُ بْنُ يَفُنَّةَ ثِيَابَهُمَا، وَهُمَا مِمَّنْ تَجَسَّسُوا الأَرْضَ،٦
7 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
وَقَالا لِكُلِّ الشَّعْبِ: «إِنَّ الأَرْضَ الَّتِي اجْتَزْنَا فِيهَا هِيَ أَرْضُ خَيْرَاتٍ عَظِيمَةٍ جِدّاً.٧
8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
فَإِنْ رَضِيَ عَنَّا الرَّبُّ يُدْخِلْنَا إِلَيْهَا وَيَهَبْهَا لَنَا، أَرْضاً تَفِيضُ لَبَناً وَعَسَلاً.٨
9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
إِنَّمَا لَا تَتَمَرَّدُوا عَلَى الرَّبِّ وَلا تَجْزَعُوا مِنْ شَعْبِ الأَرْضِ، لأَنَّنَا سَنَبْتَلِعُهُمْ كَالْخُبْزِ، فَقَدْ تَلاشَى ظِلُّ الْحِمَايَةِ عَنْهُمْ، وَالرَّبُّ مَعَنَا فَلا تَرْهَبُوهُمْ».٩
10 ೧೦ ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
وَلَكِنَّ الشَّعْبَ طَالَبَ بِرَجْمِهِمَا بِالْحِجَارَةِ. غَيْرَ أَنَّ مَجْدَ الرَّبِّ ظَهَرَ فِي خَيْمَةِ الاجْتِمَاعِ عَلَى مَرْأَىً مِنْهُمْ جَمِيعاً.١٠
11 ೧೧ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
وَقَالَ الرَّبُّ لِمُوسَى: «إِلَى مَتَى يُمْعِنُ هَذَا الشَّعْبُ فِي إِهَانَتِي، وَإِلَى مَتَى لَا يُصَدِّقُونَنِي عَلَى الرَّغْمِ مِنْ مُعْجِزَاتِي الَّتِي أَجْرَيْتُهَا فِي وَسَطِهِمْ؟١١
12 ೧೨ ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
سَأُبِيدُهُمْ بِالْوَبَأِ، وَأَجْعَلُكَ شَعْباً أَكْبَرَ وَأَعْظَمَ مِنْهُمْ».١٢
13 ೧೩ ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
فَقَالَ مُوسَى لِلرَّبِّ: «عِنْدَئِذٍ يَسْمَعُ الْمِصْرِيُّونَ، الَّذِينَ أَخْرَجْتَ هَذَا الشَّعْبَ مِنْ بَيْنِهِمْ بِقُدْرَتِكَ، بِهَذَا١٣
14 ೧೪ ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
وَيُخْبِرُونَ بِهِ أَهْلَ هَذِهِ الأَرْضِ، الَّذِينَ قَدْ سَمِعُوا يَا رَبُّ أَنَّكَ قَائِمٌ فِي وَسَطِ هَذَا الشَّعْبِ، وَأَنَّكَ قَدْ ظَهَرْتَ لَهُمْ وَجْهاً لِوَجْهٍ تُظَلِّلُهُمْ بِحِمَايَتِكَ، وَتَسِيرُ أَمَامَهُمْ فِي عَمُودِ سَحَابٍ نَهَاراً وَفِي عَمُودِ نَارٍ لَيْلاً.١٤
15 ೧೫ ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
فَإِنْ أَهْلَكْتَ هَذَا الشَّعْبَ دَفْعَةً وَاحِدَةً، فَإِنَّ الأُمَمَ الَّتِي سَمِعَتْ بِخَبَرِكَ تَقُولُ١٥
16 ೧೬ “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
إِنَّكَ قَدْ عَجَزْتَ عَنْ أَنْ تُدْخِلَ هَذَا الشَّعْبَ إِلَى الأَرْضِ الَّتِي وَعَدْتَهُمْ بِها، فَأَهْلَكْتَهُمْ فِي الصَّحْرَاءِ.١٦
17 ೧೭ ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
وَالآنَ لِتَتَعَظَّمْ قُدْرَةُ سَيِّدِي كَمَا نَطَقْتَ قَائِلاً:١٧
18 ೧೮ ‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
الرَّبُّ طَوِيلُ الأَنَاةِ، وَافِرُ الرَّحْمَةِ، يَغْفِرُ الذَّنْبَ وَالسَّيِّئَةَ. لَكِنَّهُ لَا يُبْرِئُ، بَلْ يَفْتَقِدُ ذَنْبَ الآبَاءِ فِي الأَبْنَاءِ إِلَى الْجِيلِ الثَّالِثِ وَالرَّابِعِ.١٨
19 ೧೯ ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
فَاصْفَحْ عَنْ ذَنْبِ هَذَا الشَّعْبِ بِحَسَبِ نِعْمَتِكَ، وَاغْفِرْ لَهُ كَمَا غَفَرْتَ ذُنُوبَهُ مِنْ مِصْرَ إِلَى هَهُنَا».١٩
20 ೨೦ ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
فَأَجَابَ الرَّبُّ: «قَدْ صَفَحْتُ بِحَسَبِ قَوْلِكَ.٢٠
21 ೨೧ ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
وَلَكِنْ كَمَا أَنَا حَقّاً حَيٌّ، وَكَمَا أَنَّ مَجْدَ الرَّبِّ حَقّاً يَمْلأُ الأَرْضَ،٢١
22 ೨೨ ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
فَإِنَّ جَمِيعَ الرِّجَالِ الَّذِينَ عَايَنُوا مَجْدِي وَمُعْجِزَاتِي الَّتِي أَجْرَيْتُهَا فِي مِصْرَ وَفِي الصَّحْرَاءِ، وَجَرَّبُونِي عَشْرَ مَرَّاتٍ مِنْ غَيْرِ أَنْ يُطِيعُوا قَوْلِي،٢٢
23 ೨೩ ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
لَنْ يَرَوْا الأَرْضَ الَّتِي وَعَدْتُ بِها آبَاءَهُمْ. جَمِيعُ الَّذِينَ اسْتَخَفُّوا بِي، لَنْ يُشَاهِدُوهَا.٢٣
24 ೨೪ ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
وَلَكِنْ لأَنَّ فِي عَبْدِي كَالَبَ رُوحاً مُخْتَلِفَةً، وَقَدْ تَبِعَنِي بِكُلِّ قَلْبِهِ، فَسَأُدْخِلُهُ إِلَى الأَرْضِ الَّتِي ذَهَبَ إِلَيْهَا، وَسَيَرِثُهَا نَسْلُهُ مِنْ بَعْدِهِ.٢٤
25 ೨೫ ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.
وَبِمَا أَنَّ الْعَمَالِقَةَ وَالْكَنْعَانِيِّينَ سَاكِنُونَ فِي الْوِدْيَانِ، فَارْجِعُوا غَداً إِلَى الصَّحْرَاءِ فِي اتِّجَاهِ الْبَحْرِ الأَحْمَرِ».٢٥
26 ೨೬ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
قَالَ الرَّبُّ لِمُوسَى وَهَرُونَ:٢٦
27 ೨೭ “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
«إِلَى مَتَى أَصْفَحُ عَنْ هَذِهِ الْجَمَاعَةِ الشِّرِّيرَةِ الْمُتَذَمِّرَةِ عَلَيَّ؟ لَقَدْ سَمِعْتُ تَذَمُّرَهُمْ عَلَيَّ،٢٧
28 ೨೮ ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
فَقُلْ لَهُمْ: حَيٌّ أَنَا يَقُولُ الرَّبُّ، لأُنْزِلَنَّ بِكُمْ كُلَّ مَا تَكَلَّمْتُمْ بِهِ فِي مَسْمَعِي.٢٨
29 ೨೯ ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
إِذْ تَتَسَاقَطُ جُثَثُكُمْ فِي هَذِهِ الصَّحْرَاءِ، مِنِ ابْنِ عِشْرِينَ سَنَةً فَمَا فَوْقُ مِمَّنْ تَمَّ إِحْصَاؤُهُمْ وَتَذَمَّرُوا عَلَيَّ.٢٩
30 ೩೦ ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
لَنْ تَدْخُلُوا الأَرْضَ الَّتِي وَعَدْتُ رَافِعاً يَدِي بِقَسَمٍ أَنْ أُسْكِنَكُمْ فِيهَا، مَاعَدَا كَالَبَ بنَ يَفُنَّةَ وَيَشُوعَ بْنَ نُونَ.٣٠
31 ೩೧ ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
غَيْرَ أَنِّي سَأُدْخِلُ إِلَيْهَا أَوْلادَكُمُ الَّذِينَ ادَّعَيْتُمْ أَنَّهُمْ يُصْبِحُونَ أَسْرَى، فَيَتَمَتَّعُونَ بِالأَرْضِ الَّتِي احْتَقَرْتُمُوهَا.٣١
32 ೩೨ ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
أَمَّا أَنْتُمْ فَإِنَّ جُثَثَكُمْ تَتَسَاقَطُ فِي هَذَا الْقَفْرِ،٣٢
33 ೩೩ ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
وَيَبْقَى بَنُوكُمْ فِي الصَّحْرَاءِ أَرْبَعِينَ سَنَةً، تُعَانُونَ مِنْ فُجُورِكُمْ، حَتَّى تَبْلَى جُثَثُكُمْ فِيهَا.٣٣
34 ೩೪ ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
وَتَحْمِلُونَ أَوْزَارَكُمْ أَرْبَعِينَ سَنَةً. كُلُّ يَوْمٍ بِسَنَةٍ، عَلَى عَدَدِ الأَيَّامِ الأَرْبَعِينَ الَّتِي تَجَسَّسْتُمْ فِيهَا الأَرْضَ، فَتُدْرِكُونَ عَاقِبَةَ ابْتِعَادِي عَنْكُمْ.٣٤
35 ೩೫ ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
أَنَا الرَّبُّ قَدْ تَكَلَّمْتُ، وَهَذَا مَا سَأُعَاقِبُ بِهِ هَذِهِ الْجَمَاعَةَ الشِّرِّيرَةَ الْمُتَآمِرَةَ عَلَيَّ: فِي هَذِهِ الصَّحْرَاءِ يَفْنَوْنَ وَيَمُوتُونَ».٣٥
36 ೩೬ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
أَمَّا الْجَوَاسِيسُ الَّذِينَ أَرْسَلَهُمْ مُوسَى لاِسْتِكْشَافِ الأَرْضِ، فَرَجَعُوا فَأَثَارُوا عَلَيْهِ الشَّعْبَ بِمَا رَوَّجُوهُ مِنْ أَخْبَارٍ سَيِّئَةٍ عَنِ الأَرْضِ،٣٦
37 ೩೭ ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
فَقَدْ أَمَاتَهُمُ الرَّبُّ بِالْوَبَأِ عِقَاباً لَهُمْ٣٧
38 ೩೮ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
وَلَمْ يَعِشْ مِنْهُمْ إِلّا يَشُوعُ بْنُ نُونَ وَكَالَبُ بْنُ يَفُنَّةَ.٣٨
39 ೩೯ ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
وَلَمَا أَبْلَغَ مُوسَى هَذَا الْكَلامَ إِلَى جَمِيعِ بَنِي إِسْرَائِيلَ بَكَوْا بُكَاءً شَدِيداً.٣٩
40 ೪೦ ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
وَفِي الصَّبَاحِ الْبَاكِرِ صَعِدُوا إِلَى رَأْسِ الْجَبَلِ قَائِلِينَ: «هَا نَحْنُ قَدْ أَخْطَأْنَا، فَلْنَمْضِ إِلَى الْمَكَانِ الَّذِي وَعَدَنَا بِهِ الرَّبُّ».٤٠
41 ೪೧ ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
فَقَالَ مُوسَى: «لِمَاذَا تَعْصَوْنَ أَمْرَ الرَّبِّ؟ إِنَّ عَمَلَكُمْ هَذَا لَنْ يُفْلِحَ.٤١
42 ೪೨ ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
لَا تَنْطَلِقُوا لِئَلّا تَنْهَزِمُوا أَمَامَ أَعْدَائِكُمْ، لأَنَّ الرَّبَّ لَيْسَ فِي وَسَطِكُمْ،٤٢
43 ೪೩ ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
فَالْعَمَالِقَةُ وَالْكَنْعَانِيُّونَ مُتَرَبِّصُونَ بِكُمْ هُنَاكَ فَتَهْلِكُونَ بِحَدِّ السَّيْفِ، لأَنَّكُمْ قَدِ ارْتَدَدْتُمْ عَنِ الرَّبِّ وَلَنْ يَكُونَ الرَّبُّ مَعَكُمْ».٤٣
44 ೪೪ ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
لَكِنَّهُمْ، فِي غَطْرَسَتِهِمْ، ارْتَقَوْا إِلَى قِمَّةِ الْجَبَلِ، غَيْرَ أَنَّ تَابُوتَ عَهْدِ الرَّبِّ وَمُوسَى لَمْ يَبْرَحَا مِنْ وَسَطِ الْمُخَيَّمِ.٤٤
45 ೪೫ ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
فَانْقَضَّ عَلَيْهِمِ الْعَمَالِقَةُ وَالْكَنْعَانِيُّونَ الْمُقِيمُونَ فِي ذَلِكَ الْجَبَلِ، وَهَاجَمُوهُمْ وَتَعَقَّبُوهُمْ إِلَى «حُرْمَةَ».٤٥

< ಅರಣ್ಯಕಾಂಡ 14 >