< ಅಪೊಸ್ತಲರ ಕೃತ್ಯಗಳ 5 >

1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.
तदा अनानियनामक एको जनो यस्य भार्य्याया नाम सफीरा स स्वाधिकारं विक्रीय
2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.
स्वभार्य्यां ज्ञापयित्वा तन्मूल्यस्यैकांशं सङ्गोप्य स्थापयित्वा तदन्यांशमात्रमानीय प्रेरितानां चरणेषु समर्पितवान्।
3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?
तस्मात् पितरोकथयत् हे अनानिय भूमे र्मूल्यं किञ्चित् सङ्गोप्य स्थापयितुं पवित्रस्यात्मनः सन्निधौ मृषावाक्यं कथयितुञ्च शैतान् कुतस्तवान्तःकरणे प्रवृत्तिमजनयत्?
4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.
सा भूमि र्यदा तव हस्तगता तदा किं तव स्वीया नासीत्? तर्हि स्वान्तःकरणे कुत एतादृशी कुकल्पना त्वया कृता? त्वं केवलमनुष्यस्य निकटे मृषावाक्यं नावादीः किन्त्वीश्वरस्य निकटेऽपि।
5 ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.
एतां कथां श्रुत्वैव सोऽनानियो भूमौ पतन् प्राणान् अत्यजत्, तद्वृत्तान्तं यावन्तो लोका अशृण्वन् तेषां सर्व्वेषां महाभयम् अजायत्।
6 ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.
तदा युवलोकास्तं वस्त्रेणाच्छाद्य बहि र्नीत्वा श्मशानेऽस्थापयन्।
7 ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.
ततः प्रहरैकानन्तरं किं वृत्तं तन्नावगत्य तस्य भार्य्यापि तत्र समुपस्थिता।
8 ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.
ततः पितरस्ताम् अपृच्छत्, युवाभ्याम् एतावन्मुद्राभ्यो भूमि र्विक्रीता न वा? एतत्वं वद; तदा सा प्रत्यवादीत् सत्यम् एतावद्भ्यो मुद्राभ्य एव।
9 “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.
ततः पितरोकथयत् युवां कथं परमेश्वरस्यात्मानं परीक्षितुम् एकमन्त्रणावभवतां? पश्य ये तव पतिं श्मशाने स्थापितवन्तस्ते द्वारस्य समीपे समुपतिष्ठन्ति त्वामपि बहिर्नेष्यन्ति।
10 ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.
ततः सापि तस्य चरणसन्निधौ पतित्वा प्राणान् अत्याक्षीत्। पश्चात् ते युवानोऽभ्यन्तरम् आगत्य तामपि मृतां दृष्ट्वा बहि र्नीत्वा तस्याः पत्युः पार्श्वे श्मशाने स्थापितवन्तः।
11 ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.
तस्मात् मण्डल्याः सर्व्वे लोका अन्यलोकाश्च तां वार्त्तां श्रुत्वा साध्वसं गताः।
12 ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.
ततः परं प्रेरितानां हस्तै र्लोकानां मध्ये बह्वाश्चर्य्याण्यद्भुतानि कर्म्माण्यक्रियन्त; तदा शिष्याः सर्व्व एकचित्तीभूय सुलेमानो ऽलिन्दे सम्भूयासन्।
13 ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.
तेषां सङ्घान्तर्गो भवितुं कोपि प्रगल्भतां नागमत् किन्तु लोकास्तान् समाद्रियन्त।
14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.
स्त्रियः पुरुषाश्च बहवो लोका विश्वास्य प्रभुं शरणमापन्नाः।
15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.
पितरस्य गमनागमनाभ्यां केनापि प्रकारेण तस्य छाया कस्मिंश्चिज्जने लगिष्यतीत्याशया लोका रोगिणः शिविकया खट्वया चानीय पथि पथि स्थापितवन्तः।
16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.
चतुर्दिक्स्थनगरेभ्यो बहवो लोकाः सम्भूय रोगिणोऽपवित्रभुतग्रस्तांश्च यिरूशालमम् आनयन् ततः सर्व्वे स्वस्था अक्रियन्त।
17 ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.
अनन्तरं महायाजकः सिदूकिनां मतग्राहिणस्तेषां सहचराश्च
18 ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.
महाक्रोधान्त्विताः सन्तः प्रेरितान् धृत्वा नीचलोकानां कारायां बद्ध्वा स्थापितवन्तः।
19 ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,
किन्तु रात्रौ परमेश्वरस्य दूतः काराया द्वारं मोचयित्वा तान् बहिरानीयाकथयत्,
20 “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.
यूयं गत्वा मन्दिरे दण्डायमानाः सन्तो लोकान् प्रतीमां जीवनदायिकां सर्व्वां कथां प्रचारयत।
21 ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.
इति श्रुत्वा ते प्रत्यूषे मन्दिर उपस्थाय उपदिष्टवन्तः। तदा सहचरगणेन सहितो महायाजक आगत्य मन्त्रिगणम् इस्रायेल्वंशस्य सर्व्वान् राजसभासदः सभास्थान् कृत्वा कारायास्तान् आपयितुं पदातिगणं प्रेरितवान्।
22 ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,
ततस्ते गत्वा कारायां तान् अप्राप्य प्रत्यागत्य इति वार्त्ताम् अवादिषुः,
23 “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.
वयं तत्र गत्वा निर्व्विघ्नं काराया द्वारं रुद्धं रक्षकांश्च द्वारस्य बहिर्दण्डायमानान् अदर्शाम एव किन्तु द्वारं मोचयित्वा तन्मध्ये कमपि द्रष्टुं न प्राप्ताः।
24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.
एतां कथां श्रुत्वा महायाजको मन्दिरस्य सेनापतिः प्रधानयाजकाश्च, इत परं किमपरं भविष्यतीति चिन्तयित्वा सन्दिग्धचित्ता अभवन्।
25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.
एतस्मिन्नेव समये कश्चित् जन आगत्य वार्त्तामेताम् अवदत् पश्यत यूयं यान् मानवान् कारायाम् अस्थापयत ते मन्दिरे तिष्ठन्तो लोकान् उपदिशन्ति।
26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.
तदा मन्दिरस्य सेनापतिः पदातयश्च तत्र गत्वा चेल्लोकाः पाषाणान् निक्षिप्यास्मान् मारयन्तीति भिया विनत्याचारं तान् आनयन्।
27 ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.
ते महासभाया मध्ये तान् अस्थापयन् ततः परं महायाजकस्तान् अपृच्छत्,
28 ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.
अनेन नाम्ना समुपदेष्टुं वयं किं दृढं न न्यषेधाम? तथापि पश्यत यूयं स्वेषां तेनोपदेशेने यिरूशालमं परिपूर्णं कृत्वा तस्य जनस्य रक्तपातजनितापराधम् अस्मान् प्रत्यानेतुं चेष्टध्वे।
29 ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!
ततः पितरोन्यप्रेरिताश्च प्रत्यवदन् मानुषस्याज्ञाग्रहणाद् ईश्वरस्याज्ञाग्रहणम् अस्माकमुचितम्।
30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.
यं यीशुं यूयं क्रुशे वेधित्वाहत तम् अस्माकं पैतृक ईश्वर उत्थाप्य
31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.
इस्रायेल्वंशानां मनःपरिवर्त्तनं पापक्षमाञ्च कर्त्तुं राजानं परित्रातारञ्च कृत्वा स्वदक्षिणपार्श्वे तस्यान्नतिम् अकरोत्।
32 ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.
एतस्मिन् वयमपि साक्षिण आस्महे, तत् केवलं नहि, ईश्वर आज्ञाग्राहिभ्यो यं पवित्रम् आत्मनं दत्तवान् सोपि साक्ष्यस्ति।
33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.
एतद्वाक्ये श्रुते तेषां हृदयानि विद्धान्यभवन् ततस्ते तान् हन्तुं मन्त्रितवन्तः।
34 ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.
एतस्मिन्नेव समये तत्सभास्थानां सर्व्वलोकानां मध्ये सुख्यातो गमिलीयेल्नामक एको जनो व्यवस्थापकः फिरूशिलोक उत्थाय प्रेरितान् क्षणार्थं स्थानान्तरं गन्तुम् आदिश्य कथितवान्,
35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.
हे इस्रायेल्वंशीयाः सर्व्वे यूयम् एतान् मानुषान् प्रति यत् कर्त्तुम् उद्यतास्तस्मिन् सावधाना भवत।
36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.
इतः पूर्व्वं थूदानामैको जन उपस्थाय स्वं कमपि महापुरुषम् अवदत्, ततः प्रायेण चतुःशतलोकास्तस्य मतग्राहिणोभवन् पश्चात् स हतोभवत् तस्याज्ञाग्राहिणो यावन्तो लोकास्ते सर्व्वे विर्कीर्णाः सन्तो ऽकृतकार्य्या अभवन्।
37 ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.
तस्माज्जनात् परं नामलेखनसमये गालीलीययिहूदानामैको जन उपस्थाय बहूल्लोकान् स्वमतं ग्राहीतवान् ततः सोपि व्यनश्यत् तस्याज्ञाग्राहिणो यावन्तो लोका आसन् ते सर्व्वे विकीर्णा अभवन्।
38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.
अधुना वदामि, यूयम् एतान् मनुष्यान् प्रति किमपि न कृत्वा क्षान्ता भवत, यत एष सङ्कल्प एतत् कर्म्म च यदि मनुष्यादभवत् तर्हि विफलं भविष्यति।
39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.
यदीश्वरादभवत् तर्हि यूयं तस्यान्यथा कर्त्तुं न शक्ष्यथ, वरम् ईश्वररोधका भविष्यथ।
40 ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.
तदा तस्य मन्त्रणां स्वीकृत्य ते प्रेरितान् आहूय प्रहृत्य यीशो र्नाम्ना कामपि कथां कथयितुं निषिध्य व्यसर्जन्।
41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.
किन्तु तस्य नामार्थं वयं लज्जाभोगस्य योग्यत्वेन गणिता इत्यत्र ते सानन्दाः सन्तः सभास्थानां साक्षाद् अगच्छन्।
42 ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.
ततः परं प्रतिदिनं मन्दिरे गृहे गृहे चाविश्रामम् उपदिश्य यीशुख्रीष्टस्य सुसंवादं प्रचारितवन्तः।

< ಅಪೊಸ್ತಲರ ಕೃತ್ಯಗಳ 5 >