< ಮಲಾಕಿಯನು 3 >

1 “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
“पाहा! मी माझा दूत पाठवत आहे, आणि तो माझ्यापुढे मार्ग तयार करील. आणि ज्या प्रभूला तुम्ही शोधता आणि ज्याच्यात तुम्ही आनंदी होता, तो कराराचा दूत, अचानक आपल्या मंदिरात येत आहे. पाहा तो येत आहे, असे सेनाधीश परमेश्वर म्हणतो.”
2 ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.
त्याच्या आगमनाच्या दिवशी कोण टिकून राहणार? आणि जेव्हा तो दिसेल तेव्हा कोण उभा राहिल? कारण तो शुद्धकरणाऱ्या अग्नीसारखा आणि परीटाच्या खारासारखा आहे.
3 ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.
आणि तो चांदी गाळणारा व स्वच्छ करणारा असा बनेल, आणि तो लेवीच्या संतानास शुद्ध करेल. तो त्यांना सोन्याप्रमाणे आणि चांदीप्रमाणे शुध्द करेल आणि ते न्यायीपणाने परमेश्वरास अर्पण करतील.
4 ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.
तेव्हा जसे पुरातन दिवसात आणि प्राचीन वर्षात तसे यरूशलेम व यहूदाची अर्पणे परमेश्वरास सुखकारक असतील.
5 “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
“मग मी तुमच्याकडे न्याय निवाडा करण्यासाठी येईन. आणि जादूटोणा, व्यभिचार, खोटी शपथ वाहणारे, आणि जे मोलकऱ्याला मोलाविषयी आणि विधवेला व अनाथाला पीडतात, आणि परराष्ट्रीयांचा न्याय विपरीत करतात, आणि माझे भय धरीत नाही यांच्याविरूद्ध मी त्वरीत साक्षी होईन,” सेनाधीश परमेश्वर असे म्हणतो.
6 “ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.
“कारण मी परमेश्वर आहे, मी कधीही बदलत नाही, म्हणून याकोबाच्या मुलांनो, तुमचा नाश झाला नाही.
7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.
तुमच्या पूर्वजांच्या दिवसांपासून तुम्ही माझे नियम अनुसरण्याचे सोडून भलतीकडे वळले आहात, ते तुम्ही पाळले नाहीत. माझ्याकडे फिरा म्हणजे मी तुमच्याकडे फिरेन,” सेनाधीश परमेश्वर असे म्हणतो, “पण तुम्ही म्हणता, ‘आम्ही कसे परत फिरावे?’
8 “ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!
मनुष्य देवाला लुटणार काय? तरीही तुम्ही मला लुटता. पण तुम्ही असे म्हणता, ‘आम्ही तुझे काय लुटले आहे?’ तुम्ही दशमांश व अर्पणे यांविषयी मला लुटता.
9 ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.
तुम्ही संपूर्ण राष्ट्राने मला लुटले आहे, म्हणून तुम्ही शापाने शापीत झाला आहात.”
10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
१०सेनाधीश परमेश्वर असे म्हणतो, “माझ्या घरात अन्न असावे यासाठी तुम्ही संपूर्ण दशमांश कोठरांत आणा. आणि तुम्ही असे केले म्हणजे मी तुमच्यासाठी आकाशाच्या खिडक्या उघडून जागा पुरणार नाही एवढा आशीर्वाद तुम्हावर ओतीन की नाही याविषयी माझी प्रचिती पाहा.
11 “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
११आणि खाऊन टाकणाऱ्याला मी तुमच्यासाठी धमकावेन, मग तो तुमच्या भूमीचे पीक नाश करणार नाही, तुमच्या बागेतील द्राक्षवेलींचे फळ अकाली गळणार नाही,” सेनाधीश परमेश्वर असे म्हणतो.
12 “ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
१२“सर्व राष्ट्रे तुला सुखी म्हणतील, कारण तुमची भूमी आनंदाची होईल,” असे सेनाधीश परमेश्वर म्हणतो.
13 “ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”
१३परमेश्वर म्हणतो, “तुमचे शब्द माझ्याविरूद्ध कठोर झाले आहेत. पण तुम्ही म्हणता, आम्ही तुझ्याविरूद्ध काय बोललो?”
14 “ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,
१४तुम्ही म्हणालात “परमेश्वराची सेवा करणे व्यर्थ आहे; आम्ही त्याचे आज्ञापालन केले, आणि आम्ही सेनाधीश परमेश्वरापुढे शोक करत चाललो याचा काय लाभ झाला?
15 ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”
१५तर आता आम्ही गर्विष्ठांना सुखी म्हणतो, होय, जे दुष्टाई करतात ते वाढवले जातात, आणि ते देवाची परीक्षा पाहतात तरी सुटतात.”
16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.
१६तेव्हा जे परमेश्वराचे भय धरीत असत ते एकमेकांशी बोलत होते, आणि परमेश्वराने ते ध्यान देऊन ऐकले. मग जे परमेश्वराचे भय धरत असत आणि त्याच्या नांवाचा सन्मान करत असत त्यांच्यासाठी त्यांच्यासमोर स्मरणाचे पुस्तक लिहिले गेले.
17 “ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
१७सेनाधीश परमेश्वर असे म्हणतो, “मी हे करीन त्या दिवशी ते माझे, म्हणजे माझे खासगीचे धन होतील, आणि जसा कोणी आपली सेवा करणारा आपला मुलगा याच्यावर दया करीत असतो तसा मी त्यांच्यावर दया करीन.
18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.
१८तुम्ही माझ्याकडे परत याल. मग दुष्ट मनुष्य आणि चांगला मनुष्य यातील फरक तुम्हास कळेल. देवाला अनुसरणारा व न अनुसणारा यातील फरक तुम्हास समजेल.”

< ಮಲಾಕಿಯನು 3 >