< ಅರಣ್ಯಕಾಂಡ 14 >

1 ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.
त्या रात्री सर्व मंडळीने गळा काढून जोरजोरात आक्रोश केला आणि रडले.
2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.
इस्राएल लोकांनी मोशे आणि अहरोनाविरूद्ध तक्रारी केल्या. सर्व मंडळी त्यांना म्हणाली “आम्ही मिसर देशामध्ये किंवा रानात मरण पावलो असतो तर बरे झाले असते.
3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?
तलवारीने आमचा नाश व्हावा म्हणून या नवीन प्रदेशात युद्धात जाण्यासाठीच परमेश्वराने आम्हास इथे आणले का? शत्रू आम्हास मारून टाकील आणि आमच्या स्त्रिया मुलांना घेऊन जाईल. मिसर देशात परत जाणेच आमच्या दृष्टीने जास्त बरे आहे.”
4 ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
नंतर ते एकमेकांना म्हणाले, “आपण आता दुसरा नेता निवडू आणि मिसर देशात परत जाऊ.”
5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.
तिथे जमलेल्या सर्व इस्राएलांच्या मंडळीसमोर मोशे आणि अहरोन पालथे पडले.
6 ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,
नूनाचा मुलगा यहोशवा आणि यफुन्नेचा मुलगा कालेब, जे कोणी देश तपासणीसाठी पाठवले होते त्यामधील हे दोघे होते, त्यांनी आपली वस्त्रे फाडली.
7 ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.
ते इस्राएल लोकांच्या सर्व मंडळीशी बोलले. ते म्हणाले, आम्ही जो देश हेरायला येथून तेथे फिरलो तो देश खूप चांगला आहे.
8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.
जर परमेश्वर आपल्यावर प्रसन्न झाला तर तो आपल्याला त्या देशात नेईल आणि तो दूध व मध वाहणारा देश आपल्याला देईल.
9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.
“परंतु परमेश्वराविरूद्ध बंड करू नका आणि त्या देशातल्या लोकांची भीती बाळगू नका. आपल्या अन्नाप्रमाणे आपण त्यांना सहज भक्ष्य करू. त्यांचे संरक्षण त्यांच्यापासून काढले जाईल, कारण परमेश्वर आमच्याबरोबर आहे. त्यांना घाबरु नका.”
10 ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.
१०पण सर्व मंडळी म्हणू लागली त्यांना दगडमार करा. परंतु परमेश्वराचे तेज दर्शनमंडपावर इस्राएल लोकांस दिसले.
11 ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?
११परमेश्वर मोशेला म्हणाला, “हे लोक कोठवर मला तुच्छ लेखतील? ह्यांच्यामध्ये मी केलेली शक्तीशाली चिन्हे पाहूनही त्याची पर्वा न करता माझ्यावर विश्वास ठेवण्यास चुकत आहेत.
12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.
१२मी त्यांना मरीने मारून टाकीन. मी त्यांचा वारसा हक्क काढून घेईल, आणि मी तुझ्या स्वतःच्या कुळापासून त्यांच्यापेक्षा मोठे व सामर्थ्यशाली राष्ट्र करीन.”
13 ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!
१३मोशे परमेश्वरास म्हणाला, जर तू असे केलेस तर ते मिसरी लोक ऐकतील कारण तू आपल्या सामर्थ्याने या लोकांस बाहेर आणले.
14 ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.
१४ते त्या देशातल्या राहणाऱ्यांना हे सांगतील, त्यांनी ऐकले आहे की तू परमेश्वर या लोकांच्या मध्ये आहेस, कारण तू परमेश्वर प्रत्यक्ष दिसत आहेस तुझा ढग त्यांच्यावरती उभा राहतो, आणि दिवसा ढगाच्या खांबात रात्री त्या ढगाचा अग्नीच्या खांबात तू त्यांच्यापुढे चालतोस.
15 ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,
१५आता जर तू या लोकांस एका मनुष्याप्रमाणे मारले, तर ज्या राष्ट्रांनी तुझी किर्ती ऐकली आहे ते बोलतील आणि म्हणतील,
16 ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.
१६परमेश्वराने त्यांना जो देश देण्याचे शपथपूर्वक सांगितले होते त्यामध्ये तो आणू शकला नाही म्हणून त्याने त्यांना रानात मारून टाकले.
17 “ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
१७“म्हणून आता मी विनंती करतो, तुझ्या महान सामर्थ्याचा उपयोग कर. तू, म्हणाला होतास,
18 ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?
१८परमेश्वर रागवायला मंद आहे आणि विपुल दयेने भरलेला आहे. तो अपराधांची व अधर्माची क्षमा करतो पण जे लोक अपराधी आहेत त्यांची मुळीच गय करत नाही. तो पूर्वजांच्या पापाबद्दल त्यांच्या वंशजाच्या तिसऱ्या व चौथ्या पिढीवर वडिलांच्या अन्यायाची शिक्षा लेकरांना करतो.
19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.
१९मी तुला विनंती करतो, तुझ्या महान विश्वसनीयतेच्या कराराने त्यांच्या पापांची क्षमा कर. त्यांनी मिसर सोडल्यापासून आतापर्यंत तू जसा त्यांना क्षमा करीत आला आहेत तशीच आताही त्यांना क्षमा कर.”
20 ಆಗ ಯೆಹೋವ ದೇವರು, “ನಿನ್ನ ಮಾತಿನ ಪ್ರಕಾರ ಮನ್ನಿಸಿದ್ದೇನೆ.
२०परमेश्वर म्हणाला, “तू विनंती केल्याप्रमाणे मी त्यांना क्षमा केली आहे.”
21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.
२१पण खचित जसा मी जिवंत आहे आणि सारी पृथ्वी परमेश्वराच्या वैभवाने भरलेली आहे.
22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,
२२ज्या सर्व लोकांनी माझे वैभव आणि मिसर देशात व रानात सामर्थ्याची चिन्हे पाहिले. तरी दहादा त्यांनी माझी परीक्षा पाहिली आणि माझी वाणी ऐकली नाही.
23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.
२३मी जो देश त्यांच्या पूर्वजांना शपथपूर्वक देऊ केला तो ते खचित पाहणार नाहीत. ज्यांनी मला तुच्छ मानले त्यांच्यापैकी तो कोणीही पाहणार नाही.
24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.
२४पण माझा सेवक कालेब याच्यासोबत वेगळा आत्मा होता. तो माझे अनुकरण पूर्णपणे करतो. म्हणून ज्या देशात तो गेला होता त्या देशात मी त्यास नेईल. आणि त्याच्या वंशजांना तो देश वतन होईल.
25 ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.
२५अमालेकी आणि कनानी लोक खोऱ्यात राहत आहेत. म्हणून उद्या तुम्हीही जागा सोडली पाहिजे. तांबड्या समुद्राकडे रस्त्यावरच्या रानात परत जा.
26 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,
२६परमेश्वर मोशे आणि अहरोनाशी बोलला. तो म्हणाला,
27 “ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.
२७ही दुष्ट मंडळी माझ्याविरूद्ध टिका करते त्यांचे मी किती काळ सहन करू? इस्राएली लोक माझ्याविरूद्ध तक्रार करतात त्या मी ऐकल्या आहेत.
28 ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
२८तू त्यांना सांग, परमेश्वर म्हणतो, मी जिवंत आहे. जसे तुम्ही माझ्या कानात बोलला तसे मी करीन.
29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.
२९तुमची प्रेते या रानात पडतील. तुमच्यापैकी ज्यांची गणना झाली त्यांच्या पूर्ण संख्येतील वीस वर्षांचा किंवा त्याहून अधिक वयाचे ज्यांनी माझ्याविरूद्ध कुरकुरले,
30 ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.
३०ज्या देशात तुमचे घर देण्याचे वचन मी तुम्हास दिले त्यामध्ये तुमच्यापैकी कोणीही जाणार नाही. फक्त यफुन्नेचा मुलगा कालेब आणि नूनाचा मुलगा यहोशवा जातील.
31 ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.
३१ज्या तुमच्या मुलाबाळाविषयी तुम्ही म्हणाला की, त्यांची लूट होईल. मी त्यांना त्या देशात नेईल. तुम्ही जो देश नाकारला तो देश ते अनुभवतील.
32 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಮರುಭೂಮಿಯಲ್ಲಿ ಬೀಳುವುವು.
३२आणि तुमच्याविषयी तर तुमची प्रेते या रानात पडतील.
33 ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.
३३तुमची प्रेते या रानात नष्ट होईपर्यंत चाळीस वर्षे तुमची मुलेबाळे तुम्ही केलेल्या विश्वासघाताची शिक्षा भोगीत रानात भटकणारी होतील.
34 ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
३४तुम्हास तुमच्या पापाबद्दल चाळीस वर्षे दु: ख भोगावे लागेल. त्या मनुष्यांना तो प्रदेश शोधायला चाळीस दिवस लागले. त्या प्रत्येक दिवसासाठी एक वर्ष मी तुमच्या विरोधात असणे ही किती भयानक गोष्ट आहे हे तुम्हास समजेल.
35 ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.
३५“मी परमेश्वर आहे आणि मी बोललो आहे. मी वचन देतो की या दुष्ट मनुष्यांना मी या सर्व गोष्टी करीन. माझ्याविरूद्ध जाण्यासाठी ते लोक एकत्र आले म्हणून ते सर्व या रानात मरतील.”
36 ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು.
३६मोशेने ज्या लोकांस नवीन प्रदेश शोधण्यासाठी पाठवले होते त्याच लोकांनी परत येऊन इस्राएल लोकांमध्ये तक्रारी पसरावयाला सुरुवात केली. ते लोक म्हणाले की त्या प्रदेशात जाण्याइतके आपले लोक शक्तीवान नाहीत.
37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವ ದೇವರ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
३७ज्यांनी वाईट वर्तमान आणले ते पुरुष जबाबदार होते ते परमेश्वरासमोर मरीने मरण पावले.
38 ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.
३८यफुन्नेचा मुलगा कालेब आणि नूनाचा मुलगा यहोशवा हे ही तो देश शोधायला पाठवलेल्या लोकात होते परंतु परमेश्वराने त्या दोघांना वाचवले.
39 ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು.
३९मोशेने या सर्व गोष्टी इस्राएल लोकांस सांगितल्या. लोक खूप दु: खी झाले.
40 ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.
४०दुसऱ्या दिवशी पहाटे लोकांनी डोंगरावर असलेल्या त्या देशात जायला सुरुवात केली. लोक म्हणाले, “आम्ही पाप केले आहे. आम्ही परमेश्वरावर विश्वास ठेवला नाही याचे आम्हास वाईट वाटते. परमेश्वराने वचन दिलेल्या देशात आम्ही जाऊ.”
41 ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.
४१पण मोशे म्हणाला, “तुम्ही परमेश्वराची आज्ञा का पाळत नाही? तुम्हास यश मिळणार नाही.
42 ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.
४२त्या देशात जाऊ नका. परमेश्वर तुमच्याबरोबर नाही म्हणून तुमचा सहज पराभव होऊ शकेल.
43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.
४३अमालेकी आणि कनानी लोक आहेत तुम्ही तलवारीने पडाल. तुम्ही परमेश्वरापासून दूर गेला आहात म्हणून युध्दाच्या वेळी तो तुमच्याबरोबर नसेल आणि तुम्ही सर्व युद्धात मारले जाल.”
44 ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
४४परंतु लोकांनी मोशेवर विश्वास ठेवला नाही. ते उंच डोंगरावरच्या प्रदेशात गेले. परंतु मोशे आणि परमेश्वराचा आज्ञापटाचा कोश त्यांच्याबरोबर गेला नाही.
45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.
४५डोंगरावरच्या प्रदेशात राहणारे अमालेकी आणि कनानी लोक खाली आले आणि त्यांनी इस्राएल लोकांवर हल्ला केला. त्यांनी इस्राएल लोकांचा सहज पराभव केला आणि हर्मा नगरापर्यंत त्यांचा पाठलाग केला.

< ಅರಣ್ಯಕಾಂಡ 14 >