< ಕೀರ್ತನೆಗಳು 107 >

1 ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.
ထာဝရဘုရားသည် ကောင်းမြတ်တော်မူ၍၊ ကရုဏာတော် အစဉ်အမြဲတည်သောကြောင့်၊ ဂုဏ် ကျေးဇူးတော်ကို ချီးမွမ်းကြလော့။
2 ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ
ရန်သူ၏လက်မှ ထာဝရဘုရားနှုတ်၍ အရှေ့ အနောက် တောင်မြောက်အရပ်ရပ်ထဲက စုသိမ်းသော သူတည်းဟူသော၊ ရွေးတော်မူသော သူတို့သည် ဝန်ခံ ကြစေ။
3 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.
4 ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.
သူတို့သည် တောတွင်းလူဆိတ်ညံရာအရပ်၌ လည်၍၊ နေစရာမြို့သို့ ရောက်သောလမ်းကို မတွေ့ကြ။
5 ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.
ဆာငတ်မွတ်သိပ်၍ စိတ်ပျက်ကြ၏။
6 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.
ဆင်းရဲခံရသောအခါ၊ ထာဝရဘုရားကို အော် ဟစ်၍၊ ဆင်းရဲဒုက္ခထဲက ဆယ်နှုတ်တော်မူ၏။
7 ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.
သူတို့နေစရာမြို့သို့ ရောက်စေခြင်းငှါ၊ ဖြောင့် သောလမ်းဖြင့် ပို့ဆောင်တော်မူ၏။
8 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
လူသားတို့၌ပြုတော်မူသော ကရုဏာနှင့် အံ့ဘွယ်သော အမှုတော်တို့ကို ထောက်၍၊ ထာဝရဘုရား ၏ ဂုဏ်ကျေးဇူးတော်ကို ချီးမွမ်းကြစေ။
9 ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.
အကြောင်းမူကား၊ တောင့်တသော ဝိညာဉ်ကို ရောင့်ရဲစေ၍၊ မွတ်သိပ်သော ဝိညာဉ်ကိုလည်း၊ ကောင်း သောအရာနှင့် ဝစေသော်မူ၏။
10 ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.
၁၀ထိုသူတို့သည် ဘုရားသခင်၏ အမိန့်တော်ကို ငြင်းဆန်၍၊ အမြင့်ဆုံးသော ဘုရား၏ အကြံတော်ကို မထီမဲ့မြင် ပြုသောကြောင့်၊
11 ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.
၁၁မှောင်မိုက်၊ သေမင်းအရိပ်၌ ထိုင်လျက်၊ ဒုက္ခနှင့်၎င်း၊ သံကြိုးနှင့်၎င်း ချည်နှောင်လျက် နေရကြ၏။
12 ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.
၁၂ဘုရားသခင်သည် အမှုရောက်စေ၍၊ သူတို့ စိတ်ကိုနှိမ့်ချတော်မူ၏။ သူတို့သည် လဲ၍ထောက်မသော သူမရှိဘဲ၊
13 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.
၁၃ဆင်းရဲခံရသောအခါ၊ ထာဝရဘုရားကို အော် ဟစ်၍ ဆင်းရဲဒုက္ခထဲက ကယ်တင်တော်မူ၏။
14 ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.
၁၄မှောင်မိုက်နှင့် သေမင်းအရိပ်ထဲက ထုတ် ဆောင်၍ သူတို့ချည် နှောင်ခြင်းကို ဖြေတော်မူ၏။
15 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
၁၅လူသားတို့၌ ပြုတော်မူသော ကရုဏာနှင့် အံ့ဘွယ်သောအမှုတော်တို့ကိုထောက်၍၊ ထာဝရဘုရား၏ ဂုဏ်ကျေးဇူးကို ချီးမွမ်းကြစေ။
16 ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ.
၁၆အကြောင်းမူကား၊ ကြေးဝါးတံခါးတို့ကို ချိုး၍၊ သံကန့်လန့်တို့ကို အပိုင်းပိုင်းဖြတ်တော်မူ၏။
17 ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ.
၁၇မိုက်သောသဘောရှိသော သူတို့သည်လမ်းလွှဲ၍၊ ဒုစရိုက်ကို ပြုသောကြောင့် ဆင်းရဲခြင်းနှင့် တွေ့ကြုံ ရကြ၏။
18 ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.
၁၈စားစရာမျိုးကို ရွံ၍ သေခြင်းတံခါး ငါ့အနီးသို့ ရောက်ကြ၏။
19 ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.
၁၉ဆင်းရဲခံရသောအခါ ထာဝရဘုရားကို အော် ဟစ်၍၊ ဆင်းရဲ ဒုက္ခထဲက ကယ်တင်တော်မူ၏။
20 ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.
၂၀နှုတ်ကပတ်တော်ကိုလွှတ်သဖြင့်၊ သူတို့အနာကို ငြိမ်းစေ၍၊ ဖျက်ဆီးခြင်းအရာများထဲက နှုတ်ယူတော် မူ၏။
21 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
၂၁လူသားတို့၌ ပြုတော်မူသော ကရုဏာနှင့် အံ့ဘွယ်သောအမှုတော်တို့ကို ထောက်၍၊ ထာဝရဘုရား ၏ ဂုဏ်ကျေးဇူးတော်ကို ချီးမွမ်းကြစေ။
22 ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.
၂၂ကျေးဇူးတော် ဝန်ခံရာယဇ်ကို ပူဇော်၍၊ ရွှင် လန်းသော အသံနှင့်တကွ အမှုတော်တို့ကို ကြားပြော ကြစေ။
23 ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ. ಅವರು ಜಲರಾಶಿಯಲ್ಲಿ ವ್ಯಾಪಾರ ಮಾಡುವವರು,
၂၃သင်္ဘောစီးလျက်ပင်လယ်ကိုကူး၍၊ ရေများပေါ် မှာ လုပ်ဆောင်သော သူတို့သည်၊
24 ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ.
၂၄နက်နဲရာအရပ်၌ ထာဝရဘုရား၏ အမှုတော် တို့နှင့်၊ အံ့ဘွယ်သော အမှုတော်တို့ကို မြင်ရကြ၏။
25 ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.
၂၅အမိန့်တော်ရှိ၍ လေပြင်းမုန်တိုင်းတိုက်သဖြင့်၊ လှိုင်းတံပိုးတို့ကို ထစေ၏။
26 ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ; ಅಪಾಯದಲ್ಲಿ ಅವರ ಪ್ರಾಣವು ಕಳವಳದಿಂದ ಕರಗಿ ಹೋಗುತ್ತದೆ.
၂၆မိုဃ်းကောင်းကင် တိုင်အောင်တက်လျက်၊ နက်နဲရာထဲသို့ ဆင်းလျက် တွေ့သောဘေးကြောင့်၊ သူတို့သည် စိတ်ပျက်ကြ၏။
27 ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು. ಅವರ ಜ್ಞಾನವೆಲ್ಲಾ ಮುಗಿದು ಹೋಯಿತು.
၂၇တလည်လည်သွားလျက် ယစ်မူးသော သူကဲ့သို့ တိမ်းယိမ်းလျက်နေ၍ ဥာဏ်တိမ်မြုပ်ခြင်းရှိကြ၏။
28 ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.
၂၈ဆင်းရဲခံရသောအခါ ထာဝရဘုရားကို အော် ဟစ်၍၊ ဆင်းရဲ ဒုက္ခထဲက ထုတ်ဆောင်တော်မူ၏။
29 ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು.
၂၉လေပြင်းကို ပျောက်စေတော်မူ၍၊ လှိုင်းတံပိုး များလည်း ငြိမ်ဝပ်ကြ၏။
30 ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.
၃၀ထိုသို့ ငြိမ်ဝပ်သောကြောင့် သူတို့သည် ဝမ်းမြောက်ကြ၏။ အလိုရှိရာ သင်္ဘောဆိပ်သို့ ပို့ဆောင် တော်မူ၏။
31 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
၃၁လူသားတို့၌ ပြုတော်မူသော ကရုဏာနှင့် အံ့ဘွယ်သော အမှုတော်တို့ကို ထောက်၍၊ ထာဝရ ဘုရား၏ ဂုဏ်ကျေးဇူးတော်ကို ချီးမွမ်းကြစေ။
32 ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ, ಹಿರಿಯರ ಸಭೆಯಲ್ಲಿ ದೇವರನ್ನು ಸ್ತುತಿಸಲಿ.
၃၂လူပရိတ်သတ်၏ အလယ်မှာ ထာဝရဘုရားကို ချီးမြှောက်၍ အသက်ကြီးသူတို့၏ အစည်းအဝေး၌ ချီးမွမ်းကြစေ။
33 ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.
၃၃မြစ်တို့ကို လွင်ပြင်ဖြစ်စေခြင်းငှါ၎င်း၊ စမ်းရေ ထွက်ရာအရပ်ကိုလည်း သွေ့ခြောက်စေခြင်းငှါ၎င်း ပြုတော်မူ၏။
34 ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.
၃၄မြေကောင်းသော ပြည်ကို ပြည်သူပြည်သားတို့ ၏ အပြစ်ကြောင့် ဆားမြေဖြစ်စေတော်မူ၏။
35 ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.
၃၅တဖန်လွင်ပြင်ကို ရေနှင့်ပြည့်စေခြင်းငှါ၎င်း၊ သွေ့ခြောက်သော အရပ်ကိုလည်း စမ်းရေထွက်စေခြင်းငှါ ၎င်း ပြုတော်မူ၏။
36 ಆದರೆ ದೇವರು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದರು; ಆ ಜನರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿದರು.
၃၆ထိုအရပ်၌လည်း၊ ငတ်မွတ်သောသူတို့ကို နေရာ ချတော်မူ၍၊ သူတို့သည် မိမိနေစရာဘို့မြို့ကို တည်ကြ၏။
37 ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
၃၇လယ်လုပ်လျက်၊ စပျစ်ဥယျာဉ်ကိုလည်း စိုက်ပျိုး လျက်၊ မြေအသီးအနှံတို့ကို ပြုစုကြ၏။
38 ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.
၃၈ကောင်းကြီးပေးတော်မူ၍၊ သူတို့သည် အလွန် ပွားများကြ၏။ သူတို့သိုးနွားများကိုလည်း လျော့စေတော် မမူ။
39 ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.
၃၉တဖန်သူတို့သည် လျော့၍ညှဉ်းဆဲခြင်း၊ ငြိုငြင် ခြင်း၊ စိတ်ပူပန်ခြင်းအားဖြင့် နှိမ့်ချလျက်နေရကြ၏။
40 ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.
၄၀မင်းသားတို့ကို အရှက်ခွဲ၍၊ လမ်းမရှိသော တော အရပ်၌ လည်စေတော်မူ၏။
41 ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.
၄၁ဆင်းရဲသောသူကိုလည်း ဒုက္ခမှ ထမြောက်စေ ၍၊ သိုးစုကဲ့သို့ အိမ်ထောင်ပွားများစေတော်မူ၏။
42 ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.
၄၂ဖြောင့်မတ်သောသူတို့သည် မြင်၍၊ ဝမ်းမြောက် ကြ၏။ ခပ်သိမ်းသော ဒုစရိုက်သည်လည်း မိမိနှုတ်ကို ပိတ်ရ၏။
43 ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.
၄၃အကြင်သူသည်ပညာရှိ၏၊ ထိုသူသည် ဤအမှု အရာတို့ကို ဆင်ခြင်၍၊ ထာဝရဘုရား၏ ကရုဏာ ကျေးဇူးတော်ကို နားလည်လိမ့်မည်။

< ಕೀರ್ತನೆಗಳು 107 >