< 1 कुरिन्थियों 15 >

1 हे भाऊ-बहिनों, अब मय तुम्ख याद दिलानो चाहऊ हय पहिले उच सुसमाचार सुनाय चुक्यो हय, जेक तुम न अंगीकार भी करयो होतो अऊर जेको म तुम स्थिर भी हय।
ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.
2 ओकोच सी तुम्हरो उद्धार भी होवय हय, यदि ऊ सुसमाचार ख जो मय न तुम्ख सुनायो होतो पकड़्यो रखय हय; नहीं त तुम्हरो विश्वास करनो बेकार भयो।
ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
3 योच वजह मय न सब सी पहिले तुम्ख उच बात पहुंचाय दियो, जो मोख पहुंची होती कि पवित्र शास्त्र को वचन को अनुसार या बहुत किमती बात हय कि यीशु मसीह हमरो पापों लायी मर गयो,
ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
4 अऊर गाड़्यो गयो, अऊर पवित्र शास्त्र को अनुसार तीसरो दिन जीन्दो भयो,
ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
5 अऊर पतरस ख तब बारयी ख भी दिखायी दियो।
ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.
6 तब ऊ पाच सौ सी जादा विश्वासियों ख एक संग दिखायी दियो, जिन्म सी बहुत सो अब तक जीन्दो हंय पर कुछ मर गयो।
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
7 तब ऊ याकूब ख दिखायी दियो तब सब प्रेरितों ख दिखायी दियो।
ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
8 सब को बाद मोख भी दिखायी दियो, जो मानो अधूरो दिनो को पैदा भयो हय।
ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.
9 कहालीकि मय प्रेरितों म सब सी छोटो हय, बल्की प्रेरित कहलान को लायक भी नहाय, कहालीकि मय न परमेश्वर की मण्डली ख सतायो होतो।
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
10 पर मय जो कुछ भी हय, परमेश्वर को अनुग्रह सी हय। ओको अनुग्रह जो मोरो पर भयो, ऊ बेकार नहीं भयो; पर मय न उन सब सी बढ़ क मेहनत भी करयो: तब भी यो मोरो तरफ सी नहीं भयो पर परमेश्वर को अनुग्रह मोरो पर होतो।
೧೦ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
11 येकोलायी चाहे मय आय, चाहे उन हो, हम योच प्रचार करजे हंय, अऊर येको पर तुम न विश्वास भी करयो।
೧೧ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.
12 येकोलायी जब कि मसीह को यो प्रचार करयो जावय हय कि ऊ मरयो हुयो म सी जीन्दो भयो, त तुम म सी कितनो कसो कह्य हंय कि मरयो हुयो को पुनरुत्थान हयच नहाय?
೧೨ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
13 यदि मरयो हुयो को पुनरुत्थान हयच नहाय, त मसीह भी जीन्दो नहीं भयो;
೧೩ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.
14 अऊर यदि मसीह जीन्दो नहीं भयो, त हमरो प्रचार करनो भी बेकार हय, अऊर तुम्हरो विश्वास भी बेकार हय।
೧೪ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.
15 बल्की हम परमेश्वर को झूठो गवाह ठहरबो; कहालीकि हम न परमेश्वर को बारे म या गवाही दी कि ओन मसीह ख जीन्दो कर दियो, जब कि नहीं जीन्दो करयो यदि मरयो हुयो नहीं जीन्दो होवय।
೧೫ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
16 अऊर यदि मुर्दा जीन्दो नहीं होतो, त मसीह भी नहीं जीन्दो होतो;
೧೬ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.
17 अऊर यदि मसीह नहीं जीन्दो भयो, त तुम्हरो विश्वास बेकार हय, अऊर तुम अब तक अपनो पापों म फस्यो हय।
೧೭ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
18 बल्की जो मसीह म विश्वास करन वालो मर गयो, हि भी नाश भयो।
೧೮ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.
19 यदि हम केवल योच जीवन म मसीह सी आशा रखजे हंय त हम सब आदमियों सी जादा दयालु हंय।
೧೯ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
20 पर सचमुच मसीह मुर्दा म सी जीन्दो भयो हय, अऊर जो मर गयो हंय उन्म ऊ पहिलो सबूत हय।
೨೦ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
21 कहालीकि जब एक आदमी को द्वारा हि मृत्यु आयी, त एक आदमी को द्वाराच मरयो हुयो को पुनरुत्थान भी आयो।
೨೧ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
22 अऊर जसो आदम न सब पर मृत्यु लायी, वसोच मसीह सब ख जीवन देयेंन,
೨೨ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
23 मृत्यु म सी पहिले मसीह जीन्दो होयेंन, तब ऊ वापस आयेंन तब ओको पर जो विश्वास करेंन ऊ जीन्दो होयेंन।
೨೩ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
24 येको बाद अन्त होयेंन। ऊ समय ऊ पूरो शासक, अधिकार अऊर सामर्थ को मसीह को द्वारा अन्त कर क् राज्य ख परमेश्वर पिता को हाथ म सौंप देयेंन।
೨೪ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
25 कहालीकि जब तक ऊ अपनो दुश्मनों ख अपनो पाय खल्लो नहीं ले आवय, तब तक मसीह को राज्य करनो जरूरी हय।
೨೫ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
26 सब सी आखरी दुश्मन जो नाश करयो जायेंन, वा मृत्यु आय।
೨೬ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
27 कहालीकि शास्त्र कह्य हय “परमेश्वर न सब कुछ ओको पाय खल्लो कर दियो हय,” पर जब ऊ कह्य हय कि सब कुछ मसीह को अधीन कर दियो गयो हय त स्पष्ट हय कि जेन ओको अधीन कर दियो, परमेश्वर खुद अलग रह्यो।
೨೭“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.
28 अऊर जब सब कुछ ओको अधीन होय जायेंन, त बेटा खुद भी ओको अधीन होय जायेंन, जेन ओको अधीन कर दियो, ताकि सब म परमेश्वर सब बातों म राज करेंन।
೨೮ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
29 नहीं त जो लोग मरयो हुयो लायी बपतिस्मा लेवय हंय हि का करेंन? यदि मुर्दा फिर सी जीन्दो होतोच नहीं त फिर कहाली उन्को लायी बपतिस्मा लेवय हंय?
೨೯ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
30 अऊर हम भी कहाली हर समय खतरा म पड़्यो रहजे हंय?
೩೦ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?
31 हे भाऊ-बहिनों, मोख ऊ गर्व सी जो हमरो प्रभु मसीह यीशु म मय तुम्हरो बारे म करू हय कि मय हर दिन मरू हय।
೩೧ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
32 यदि मय आदमी की रीति पर इफिसुस म जंगल को जनावर जसो सी लड़्यो त मोख का फायदा भयो? यदि मुर्दा जीन्दो करयो नहीं जाये, “त आवो, खाबोंन-पीबो, कहालीकि कल त मरनोच हय।”
೩೨ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
33 धोका मत खा, “बुरी संगति अच्छो चरित्र ख बिगाड़ देवय हय।”
೩೩ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
34 जसो की उचित हय अऊर पाप छोड़ो; कहालीकि कुछ असो हंय जो परमेश्वर ख नहीं जानय। मय तुम्ख शर्मिन्दा करन लायी यो कहू हय।
೩೪ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
35 अब कोयी यो कहेंन, “मुर्दा कसी रीति सी जीन्दो उठय हंय, अऊर कसो शरीर को संग आवय हय?”
೩೫“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
36 हे मुर्ख! जो कुछ तय बोवय हय, जब तक पहिले मर नहीं जावय, तब तक जीन्दो नहीं होवय।
೩೬ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.
37 अऊर जो तय बोवय हय, यो ऊ पौधा नोहोय जो बढ़न वालो हय, पर निरो दाना आय, चाहे गहूं को चाहे कोयी अऊर अनाज को।
೩೭ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
38 पर परमेश्वर अपनी इच्छा को जसो ओख शरीर देवय हय, अऊर हर एक बीज ख ओकी विशेष शरीर।
೩೮ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.
39 सब शरीर एक जसो नहीं: आदमियों को शरीर अऊर हय, पशुवों को शरीर अऊर हय; पक्षिंयों को शरीर अऊर हय; मच्छी को शरीर अऊर हय।
೩೯ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ.
40 स्वर्गीय शरीर हंय अऊर पार्थिव शरीर भी हंय। पर स्वर्गीय शरीर को तेज अऊर हय, अऊर पार्थिव को अऊर।
೪೦ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
41 सूरज को तेज अऊर हय, चन्दा को तेज अऊर हय, अऊर चांदनियों को तेज अऊर हय, कहालीकि एक तारा सी दूसरों तारा को तेज म अन्तर हय।
೪೧ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
42 मुर्दा को जीन्दो होनो भी असोच हय। शरीर नाशवान दशा म बोयो जावय हय अऊर अविनाशी रूप म जीन्दो उठय हय।
೪೨ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
43 ऊ अपमान को संग बोयो जावय हय, अऊर तेज को संग जीन्दो होवय हय; कमजोर को संग बोयो जावय हय, अऊर महिमा को संग जीन्दो होवय हय।
೪೩ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;
44 स्वाभाविक शरीर गड़ायो जावय हय, अऊर आत्मिक शरीर जीन्दो होवय हय: जब कि स्वाभाविक शरीर हय, त आत्मिक शरीर भी हय।
೪೪ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.
45 असोच शास्त्र म लिख्यो हय, कि “पहिलो आदमी, मतलब आदम जीन्दो प्रानी बन्यो” अऊर आखरी आदम, जीवन दायक आत्मा हय।
೪೫“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
46 पर पहिले आत्मिक नहीं होतो पर स्वाभाविक शरीर होतो, येको बाद आत्मिक भयो।
೪೬ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು.
47 पहिलो आदमी आदम धरती सी मतलब माटी को होतो; दूसरों आदमी स्वर्गीय आय।
೪೭ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
48 जसो ऊ माटी को होतो, वसोच हि भी हंय जो माटी को हंय; अऊर जसो ऊ स्वर्गीय हय, वसोच हि भी हंय जो स्वर्गीय हंय।
೪೮ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
49 अऊर जसो हम न ओको शरीर धारन करयो जो माटी को होतो वसोच ऊ स्वर्गीय रूप भी धारन करबो।
೪೯ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
50 हे भाऊ-बहिनों, मय यो कहू हय कि मांस अऊर खून परमेश्वर को राज्य को अधिकारी नहीं होय सकय, अऊर नहीं नाशवान अविनाशी को अधिकारी होय सकय हय।
೫೦ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
51 देखो, मय तुम सी भेद की बात कहू हय: हम सब नहीं मरबो, पर सब बदल जायेंन,
೫೧ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.
52 अऊर यो पल भर म, पलक मारतोच आखरी तुरही फूकतोच होयेंन। कहालीकि तुरही फूकी जायेंन अऊर मुर्दा अविनाशी दशा म उठायो जायेंन, अऊर हम बदल जाबो।
೫೨ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
53 कहालीकि जरूरी हय कि यो नाशवान शरीर अविनाश ख पहिन ले, अऊर यो मरनहार शरीर अमरता ख पहिन ले।
೫೩ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
54 अऊर जब यो नाशवान अविनाश ख पहिन लेन, अऊर यो मरनहार अमरता ख पहिन लेन, तब ऊ वचन जो लिख्यो हय पूरो होय जायेंन: “जय न मृत्यु को नाश कर दियो।”
೫೪ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
55 “हे, मृत्यु, तोरी जय कित रही? हे, मृत्यु, तोरो डंक कित रह्यो?” (Hadēs g86)
೫೫“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86)
56 मृत्यु को डंक पाप हय, अऊर पाप ख मूसा को व्यवस्था सी ताकत मिलय हय।
೫೬ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.
57 पर परमेश्वर को धन्यवाद हो, जो हमरो प्रभु यीशु मसीह को द्वारा हम्ख जयवन्त करय हय।
೫೭ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
58 येकोलायी हे मोरो प्रिय भाऊ-बहिनों, मजबूत अऊर अटल रहो, अऊर प्रभु को काम म हमेशा बढ़तो जावो, कहालीकि यो जानय हय कि तुम्हरी मेहनत प्रभु म बेकार नहाय।
೫೮ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

< 1 कुरिन्थियों 15 >